ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದಿನಿಂದ ಮುಂದಿನ 5 ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಅಥವಾ ಬಿಸಿಗಾಳಿ ಎಚ್ಚರಿಕೆ ನೀಡಿದೆ. ಕರ್ನಾಟಕ, ಗೋವಾ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ, ತಮಿಳುನಾಡು ಮತ್ತು ಕೇರಳ ಸೇರಿದಂತೆ ಭಾರತದ ಹೆಚ್ಚಿನ ಭಾಗಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿಗಳೊಂದಿಗೆ ಬಿಸಿ ಮತ್ತು ಆರ್ದ್ರ ವಾತಾವರಣದ ಮುನ್ಸೂಚನೆ ನೀಡಿದೆ. ಹೀಗಾಗಿ ಸಾರ್ವಜನಿಕರು ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸೂಚಿಸಿದೆ.
ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ಆರ್ದ್ರ ವಾತಾವರಣ ಇರುತ್ತದೆ. ಹವಾಮಾನ ಇಲಾಖೆಯು ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ಅನ್ನು ಘೋಷಿಸಿದೆ. ಒಟ್ಟಾರೆಯಾಗಿ, ಮುಂದಿನ ಐದು ದಿನಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ.
ಸುಡುವ ಸೂರ್ಯನಿಗೆ ದೀರ್ಘಕಾಲ ತೆರೆದುಕೊಳ್ಳುವವರಲ್ಲಿ ಶಾಖ-ಸಂಬಂಧಿತ ಅನಾರೋಗ್ಯದ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಆರೋಗ್ಯ ಕಾಳಜಿ ಎಚ್ಚರಿಕೆಗಳನ್ನು ಸಹ ನೀಡಲಾಗಿದೆ.ಹೈಬಿಪಿ, ಹೃದಯ ಸಂಬಂಧಿ ಖಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ದೇಹದ ಉಷ್ಣತೆ 40 ಡಿಗ್ರಿ ಸೆಲ್ಸಿಯಸ್ ಮೀರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಹೀಟ್ ಸ್ಟೋಕ್ ಜೀವಕ್ಕೆ ಕುತ್ತು ತರುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…