ಬೆಂಗಳೂರು : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ಆಹಾರಧಾನ್ಯವಾದ ಕುಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ವಿಧಾನಸೌಧದಲ್ಲಿಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಶೇಷ ಸಭೆ ನಡೆಯಿತು.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರ ಪ್ರಮುಖ ಆಹಾರ ಧಾನ್ಯ ಕುಚಲಕ್ಕಿ ಆಗಿದ್ದು, ಈ ಭಾಗದ ಜನರಿಗೆ ಕುಚಲಕ್ಕಿ ಬಹುದಿನಗಳ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು ಈಗಾಗಲೆ ಕೇರಳ ರಾಜ್ಯಕ್ಕೆ ರಾಜ್ಯದ ನಿಯೋಗ ಭೇಟಿ ನೀಡಿ ಅಧ್ಯಯನ ನಡೆಸಿದೆ ಎಂದು ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಕರಾವಳಿ ಜಿಲ್ಲೆಗಳಿಗೆ ಪ್ರತಿ ತಿಂಗಳು 1ಲಕ್ಷ ಕ್ವಿಂಟಾಲ್ ಅಕ್ಕಿ ಅಗತ್ಯವಿದ್ದು, ವರ್ಷಕ್ಕೆ 12ಲಕ್ಷ ಕ್ವಿಂಟಾಲ್ ಅಗತ್ಯವಿದೆ. ಇದಕ್ಕಾಗಿ ವರ್ಷಕ್ಕೆ ಕನಿಷ್ಠ 18ಲಕ್ಷ ಕ್ವಿಂಟಾಲ್ ಭತ್ತ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.
ಜಯ, ಜ್ಯೋತಿ, ಎಂಎಫ್4 ಅಂತಹ ಭತ್ತದ ತಳಿಗಳಿಂದ ಮಾತ್ರ ಕುಚಲಕ್ಕಿ ಮಾಡಲು ಸಾಧ್ಯವಿದ್ದು, ಈ ಎರಡು ಜಿಲ್ಲೆಗಳಿಂದ ಕೇವಲ ಎರಡೂವರೆ ಲಕ್ಷ ಕ್ವಿಂಟಾಲ್ ಭತ್ತ ಮಾತ್ರ ಉತ್ಪಾದನೆಯಾಗುತ್ತಿದೆ. ಇನ್ನುಳಿದ ಭತ್ತವನ್ನು ಮೈಸೂರು, ಮಂಡ್ಯ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಂದ ಖರೀದಿಗೆ ಕ್ರಮ ವಹಿಸಲಾಗುವುದು. ಆದರೆ ಪೂರ್ಣ ಪ್ರಮಾಣದಲ್ಲಿ ಭತ್ತ ಸಿಗುತ್ತಿಲ್ಲ ಎಂದರು.
ಈ ಸಂಬಂಧ ಹೆಚ್ಚುವರಿ ಬೇಡಿಕೆಯನ್ನು ಕೇರಳ ಮತ್ತು ತೆಲಂಗಾಣ ಜಿಲ್ಲೆಗಳಿಂದ ಭತ್ತ ಪೂರೈಸಿಕೊಳ್ಳಲು ಯೋಜಿಸಲಾಗಿದೆ. ಈ ಸಂಬಂಧ ಈ ವಾರಾಂತ್ಯದಲ್ಲಿ ಮತ್ತೊಂದು ಅಧ್ಯಯನ ತಂಡ ತೆಲಂಗಾಣಕ್ಕೆ ಭೇಟಿ ನೀಡಲಿದೆ ಎಂದರು.
ಅಧ್ಯಯನ ತಂಡಗಳ ವರದಿ ಆಧರಿಸಿ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಸಂಸದರ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಬರುವ ವರ್ಷದಿಂದಲೇ ಈ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತೆ ಕನಗವಲ್ಲಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೋಡ್ಗಿ, ಅಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೋಮಣ್ಣನವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ವಿಜಯಕುಮಾರ್ ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…