Featured

ಕರಾವಳಿ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ ; ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ – Vishwanews24

ಕರಾವಳಿ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ..

ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ..

ಬೆಂಗಳೂರು : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ಆಹಾರಧಾನ್ಯವಾದ ಕುಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ವಿಧಾನಸೌಧದಲ್ಲಿಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಶೇಷ ಸಭೆ ನಡೆಯಿತು.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರ ಪ್ರಮುಖ ಆಹಾರ ಧಾನ್ಯ ಕುಚಲಕ್ಕಿ ಆಗಿದ್ದು, ಈ ಭಾಗದ ಜನರಿಗೆ ಕುಚಲಕ್ಕಿ ಬಹುದಿನಗಳ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು ಈಗಾಗಲೆ ಕೇರಳ ರಾಜ್ಯಕ್ಕೆ ರಾಜ್ಯದ ನಿಯೋಗ ಭೇಟಿ ನೀಡಿ ಅಧ್ಯಯನ ನಡೆಸಿದೆ ಎಂದು ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಕರಾವಳಿ ಜಿಲ್ಲೆಗಳಿಗೆ ಪ್ರತಿ ತಿಂಗಳು 1ಲಕ್ಷ ಕ್ವಿಂಟಾಲ್ ಅಕ್ಕಿ ಅಗತ್ಯವಿದ್ದು, ವರ್ಷಕ್ಕೆ 12ಲಕ್ಷ ಕ್ವಿಂಟಾಲ್ ಅಗತ್ಯವಿದೆ. ಇದಕ್ಕಾಗಿ ವರ್ಷಕ್ಕೆ ಕನಿಷ್ಠ 18ಲಕ್ಷ ಕ್ವಿಂಟಾಲ್ ಭತ್ತ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

ಜಯ, ಜ್ಯೋತಿ, ಎಂಎಫ್4 ಅಂತಹ ಭತ್ತದ ತಳಿಗಳಿಂದ ಮಾತ್ರ ಕುಚಲಕ್ಕಿ ಮಾಡಲು ಸಾಧ್ಯವಿದ್ದು, ಈ ಎರಡು ಜಿಲ್ಲೆಗಳಿಂದ ಕೇವಲ ಎರಡೂವರೆ ಲಕ್ಷ ಕ್ವಿಂಟಾಲ್ ಭತ್ತ ಮಾತ್ರ ಉತ್ಪಾದನೆಯಾಗುತ್ತಿದೆ. ಇನ್ನುಳಿದ ಭತ್ತವನ್ನು ಮೈಸೂರು, ಮಂಡ್ಯ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಂದ ಖರೀದಿಗೆ ಕ್ರಮ ವಹಿಸಲಾಗುವುದು. ಆದರೆ ಪೂರ್ಣ ಪ್ರಮಾಣದಲ್ಲಿ ಭತ್ತ ಸಿಗುತ್ತಿಲ್ಲ ಎಂದರು.

ಈ ಸಂಬಂಧ ಹೆಚ್ಚುವರಿ ಬೇಡಿಕೆಯನ್ನು ಕೇರಳ ಮತ್ತು ತೆಲಂಗಾಣ ಜಿಲ್ಲೆಗಳಿಂದ ಭತ್ತ ಪೂರೈಸಿಕೊಳ್ಳಲು ಯೋಜಿಸಲಾಗಿದೆ. ಈ ಸಂಬಂಧ ಈ ವಾರಾಂತ್ಯದಲ್ಲಿ ಮತ್ತೊಂದು ಅಧ್ಯಯನ ತಂಡ ತೆಲಂಗಾಣಕ್ಕೆ ಭೇಟಿ ನೀಡಲಿದೆ ಎಂದರು.

ಅಧ್ಯಯನ ತಂಡಗಳ ವರದಿ ಆಧರಿಸಿ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಸಂಸದರ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಬರುವ ವರ್ಷದಿಂದಲೇ ಈ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತೆ ಕನಗವಲ್ಲಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೋಡ್ಗಿ, ಅಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೋಮಣ್ಣನವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ವಿಜಯಕುಮಾರ್ ಉಪಸ್ಥಿತರಿದ್ದರು.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

14 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

14 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

15 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

15 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

16 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

16 hours ago