ಬೆಂಗಳೂರು: ಭಾರೀ ಮಳೆ ಸುರಿಯುತ್ತಿರುವ ಕರಾವಳಿ ಜಿಲ್ಲೆಗಳ ʻಮಳೆಹಾನಿ ಪ್ರದೇಶಗಳಿಗೆ ʼ ನಾಳೆ ಭೇಟಿ ನೀಡಲಿದ್ದೇನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳಿಗೆ ಮಾಹಿತಿ ತಿಳಿಸಿದ್ದಾರೆ.
ಮಳೆ ಪೀಡಿತ ಪ್ರದೇಶಗಳಾದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಭೇಟಿ ಮಾಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸುತ್ತೇನೆ. ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತೇನೆ , ನೆರೆ ಹಾನಿ ವೀಕ್ಷಿಸಿ ಸ್ಥಳದಲ್ಲೇ ಸೂಚನೆ ನೀಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.
ಜು. 12ರ ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡಿ, ಆ ಬಳಿಕ ಜು. 14 ಕಾರವಾರಕ್ಕೆ ಭೇಟಿ ನೀಡುತ್ತೇನೆ. ರಾಜ್ಯದ ಕಳೆದ 10 ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ತೀವವಾಗಿ ಮಳೆ ಸುರಿಯುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಅಲ್ಲದೆ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಪರಿಹಾರ ಕಾರ್ಯಗಳ ಬಗ್ಗೆ ಸಭೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…