Featured

ಕರಾವಳಿ ಜಿಲ್ಲೆಗಳ ಮೀನುಗಾರಿಕೆ ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಯೋಜನೆ : ಯಶ್ ಪಾಲ್ ಸುವರ್ಣ ಮನವಿ -Vishwanews24

ಕರಾವಳಿ ಜಿಲ್ಲೆಗಳ ಮೀನುಗಾರಿಕೆ ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಯೋಜನೆ : ಯಶ್ ಪಾಲ್ ಸುವರ್ಣ ಮನವಿ -Vishwanews24

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಮೀನುಗಾರರ ಹಲವು ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಮುಂಬರುವ 2022- 23ನೇ ಸಾಲಿನ ಬಜೆಟ್ ನಲ್ಲಿ ವಿಶೇಷ ಯೋಜನೆ ರೂಪಿಸುವಂತೆ ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಪರವಾಗಿ ಮೀನುಗಾರಿಕೆ ಸಚಿವರಾದ ಅಂಗಾರ ರವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಮೀನುಗಾರಿಕೆ ಸಚಿವರ ಅಧ್ಯಕ್ಷತೆ ಯಲ್ಲಿ ಜರಗಿದ ಮೀನುಗಾರಿಕೆ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮೀನುಗಾರರ ಬಹುದಿನಗಳ ಬೇಡಿಕೆಗಳಾದ ರಾಜ್ಯ ಮಾರಾಟ ಕರಮುಕ್ತ ಡೀಸೆಲ್ ಕೋಟಾ ಹೆಚ್ಚಳ, ಸೀ ಆಂಬ್ಯುಲೆನ್ಸ್ ಮತ್ತು ತುರ್ತು ಚಿಕಿತ್ಸಾ ಘಟಕ, ಕಾಪು ತೀರದಲ್ಲಿ ನಾಡ ದೋಣಿ ತಂಗಲು ಇಳಿದಾಣ ಕೇಂದ್ರ, ಬಂದರು ಹೂಳು ತೆಗೆಯಲು ಇಲಾಖೆ ವತಿಯಿಂದ ಡ್ರೆಜ್ಜರ್ ಖರೀದಿ, ಮೀನುಗಾರರಿಗೆ 1 ಲಕ್ಷದ ವರೆಗೆ ಶೂನ್ಯ ಬಡ್ಡಿದರ ಸಾಲ ಯೋಜನೆ, ನಾಡ ದೋಣಿಗಳಿಗೆ ಸೀಮೆ ಏಣ್ಣೆ ಪ್ರಮಾಣ ಹೆಚ್ಚಳ, ನಾಡ ದೋಣಿಗಳಿಗೆ ಇಲೆಕ್ಟ್ರಿಕಲ್ ಇಂಜಿನ್ ಪರಿವರ್ತನೆ ಗೆ ಸಹಾಯ ಧನ, ಮೀನುಗಾರರ ಸಹಕಾರಿ ಸಂಘಗಳ ಸಾಲ ಮನ್ನಾ, ಮತ್ಸ್ಯ ಮಹಿಳಾ ಸ್ವಾವಲಂಬನೆ ಯೋಜನೆ ಸಹಿತ ಹಲವು ಯೋಜನೆಗಳಿಗೆ ಬಜೆಟ್ ನಲ್ಲಿ ಅನುದಾನ ಒದಗಿಸಿ ಮೀನುಗಾರಿಕೆ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಮಾ, ನಿರ್ದೇಶಕರಾದ ರಾಮಾಚಾರ್ಯ, ಅಪರ ನಿರ್ದೇಶಕರಾದ ತಿಪ್ಪೇಸ್ವಾಮಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಎಂ ಕೆ, ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಷನ್ ವ್ಯವಸ್ಥಾಪಕ ನಿರ್ದೇಶಕ ಹರೀಶ್ ಕುಮಾರ್ ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

18 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

18 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

22 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

22 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

22 hours ago