Featured

ಕರಾವಳಿ ಜಿಲ್ಲೆಗೆ ಕುಚಲಕ್ಕಿ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24

ಕರಾವಳಿ ಜಿಲ್ಲೆಗೆ ಕುಚಲಕ್ಕಿ ಪಡಿತರಕ್ಕೆ ಜನಸಾಮಾನ್ಯರಿಗೆ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರದ ಮೂಲಕ ವಿತರಿಸುತ್ತಿರುವ ಕುಚಲಕ್ಕಿ ಅತ್ಯಂತ ಕಳಪೆ ಗುಣಮಟ್ಟದ್ದಾಗಿದ್ದು, ಜನಸಾಮಾನ್ಯರು ಅದರಲ್ಲೂ ಬಡವರು ಅಕ್ಕಿಯನ್ನು ಉಪಯೋಗಿಸದೆ ಕಡಿಮೆ ದರಕ್ಕೆ ಮಾರಾಟ ಮಾಡಿ ಹೆಚ್ಚು ದರದ ಕೆಂಪು ಕುಚಲಕ್ಕಿಯನ್ನು ಖರೀದಿಸುತ್ತಿದ್ದಾರೆ. ಕೆಲವು ಕಡೆ ಪಡಿತರ ಅಕ್ಕಿಯನ್ನೇ ಪಡೆಯುತ್ತಿಲ್ಲ. ಇದರಿಂದಾಗಿ ಪಡಿತರದ ಮೂಲಕ ತೆಗೆದುಕೊಂಡ ಕಳಪೆ ಗುಣಮಟ್ಟದ ಅಕ್ಕಿಯನ್ನು ಮಾರಾಟ ಮಾಡಿದ ಹಿನ್ನಲೆಯಲ್ಲಿ ಕ್ರಿಮಿನಲ್ ಕೇಸುಗಳು ದಾಖಲಾಗುತ್ತಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಬೇಕಾಗುವ ಕುಚಲಕ್ಕಿಯನ್ನು ಸ್ಥಳೀಯ ರೈತರಿಂದ ಸಂಗ್ರಹಿಸಿ ಅಲ್ಲಿಯ ಪಡಿತರಕ್ಕೆ ಜನಸಾಮಾನ್ಯರಿಗೆ ವಿತರಿಸಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವರಾದ ಎಸ್ ಅಂಗಾರ ರವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮನವಿ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಸುಮಾರು 58 ಸಾವಿರ ಕ್ವಿಂಟಲ್ ಪಡಿತರ ಅಕ್ಕಿಯ ಅಗತ್ಯವಿದ್ದು, ಉಡುಪಿ ಜಿಲ್ಲೆಗೆ 40 ಸಾವಿರ ಕ್ವಿಂಟಲ್ ಪಡಿತರ ಅಕ್ಕಿ ಬೇಕಾಗಿದ್ದು, ಒಟ್ಟು ಸರಾಸರಿ ತಿಂಗಳಿಗೆ ಒಂದು ಲಕ್ಷ ಕ್ವಿಂಟಲ್ ಆಗತ್ಯವಿದ್ದು ಇದಕ್ಕೆ ಬೇಕಾಗುವಷ್ಟು ಭತ್ತದ ಬೆಳೆ ಅವಳಿ ಜಿಲ್ಲೆಯಲ್ಲಿ ಲಭ್ಯವಿಲ್ಲದೇ ಇರುವುದರಿಂದ ಮೈಸೂರು, ಮಂಡ್ಯ ಮುಂತಾದೆಡೆಯಿಂದ ಜಯ ಮತ್ತು ಇನ್ನಿತರ ಭತ್ತದ ತಳಿಯ ಫಸಲನ್ನು ಸಂಗ್ರಹಿಸಿ ಕುಚಲಕ್ಕಿಯನ್ನು ತಯಾರಿಸುವ ಕುರಿತು ಮುಖ್ಯ ಮಂತ್ರಿಗಳಿಗೆ ಮನವಿ ಸಮರ್ಪಿಸಲಾಯಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ತಕ್ಷಣ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

ನಂತರ ವಿಧಾನಸೌಧದಲ್ಲಿ ಸಚಿವ ಕೋಟ ಅವರ ಕಛೇರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಶ್ರೀ ಉಮೇಶ್ ವಿ, ಕತ್ತಿ, ಮಾನ್ಯ ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್. ಅಂಗಾರ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾದ ಶ್ರೀ ಕಿರಣ್ ಕೊಡ್ಗಿ, ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಶ್ರೀ ಸಂಜೀವ ಮಠಂದೂರು ಮುಂತಾದ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಸಮಕ್ಷಮ ನಡೆದ ಸಭೆಯಲ್ಲಿ ಮುಂದಿನ ಒಂದು ವಾರಗಳಲ್ಲಿ ಕರಾವಳಿ ಜಿಲ್ಲೆಯ ಅಕ್ಕಿ ಗಿರಣಿ ಮಾಲೀಕರು ಮತ್ತು ಆಹಾರ ನಿಗಮದ ಅಧಿಕಾರಿಗಳು ಮತ್ತು ಅವಳ ಜಿಲ್ಲೆಯ ಜಿಲ್ಲಾಧಿಕಾರಿಗಳ ಸಮಕ್ಷಮ ಸಭೆ ನಡೆಸಿ ಕುಚಲಕ್ಕಿಯ ತಯಾರಿಕೆಗಾಗಿ ಭತ್ತದ ಖರೀದಿ, ಸಂಸ್ಕರಣೆ, ವಿತರಣೆ ಕುರಿತು ಸೂಕ್ತ ಮಾರ್ಗೋಪಾಯ ಕಂಡುಹಿಡಿಯಲು ಅಗತ್ಯ ಕ್ರಮಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸಚಿವ ಶ್ರೀ ಉಮೇಶ್ ವಿ, ಕತ್ತಿಯವರು ಸೂಚಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಉಪ ನಿರ್ದೇಶಕರು ಉಪಸ್ಥಿತರಿದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago