Featured

ಕರಾವಳಿ ಜಿಲ್ಲೆಗೆ ಕುಚಲಕ್ಕಿ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24

ಕರಾವಳಿ ಜಿಲ್ಲೆಗೆ ಕುಚಲಕ್ಕಿ ಪಡಿತರಕ್ಕೆ ಜನಸಾಮಾನ್ಯರಿಗೆ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರದ ಮೂಲಕ ವಿತರಿಸುತ್ತಿರುವ ಕುಚಲಕ್ಕಿ ಅತ್ಯಂತ ಕಳಪೆ ಗುಣಮಟ್ಟದ್ದಾಗಿದ್ದು, ಜನಸಾಮಾನ್ಯರು ಅದರಲ್ಲೂ ಬಡವರು ಅಕ್ಕಿಯನ್ನು ಉಪಯೋಗಿಸದೆ ಕಡಿಮೆ ದರಕ್ಕೆ ಮಾರಾಟ ಮಾಡಿ ಹೆಚ್ಚು ದರದ ಕೆಂಪು ಕುಚಲಕ್ಕಿಯನ್ನು ಖರೀದಿಸುತ್ತಿದ್ದಾರೆ. ಕೆಲವು ಕಡೆ ಪಡಿತರ ಅಕ್ಕಿಯನ್ನೇ ಪಡೆಯುತ್ತಿಲ್ಲ. ಇದರಿಂದಾಗಿ ಪಡಿತರದ ಮೂಲಕ ತೆಗೆದುಕೊಂಡ ಕಳಪೆ ಗುಣಮಟ್ಟದ ಅಕ್ಕಿಯನ್ನು ಮಾರಾಟ ಮಾಡಿದ ಹಿನ್ನಲೆಯಲ್ಲಿ ಕ್ರಿಮಿನಲ್ ಕೇಸುಗಳು ದಾಖಲಾಗುತ್ತಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಬೇಕಾಗುವ ಕುಚಲಕ್ಕಿಯನ್ನು ಸ್ಥಳೀಯ ರೈತರಿಂದ ಸಂಗ್ರಹಿಸಿ ಅಲ್ಲಿಯ ಪಡಿತರಕ್ಕೆ ಜನಸಾಮಾನ್ಯರಿಗೆ ವಿತರಿಸಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವರಾದ ಎಸ್ ಅಂಗಾರ ರವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮನವಿ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಸುಮಾರು 58 ಸಾವಿರ ಕ್ವಿಂಟಲ್ ಪಡಿತರ ಅಕ್ಕಿಯ ಅಗತ್ಯವಿದ್ದು, ಉಡುಪಿ ಜಿಲ್ಲೆಗೆ 40 ಸಾವಿರ ಕ್ವಿಂಟಲ್ ಪಡಿತರ ಅಕ್ಕಿ ಬೇಕಾಗಿದ್ದು, ಒಟ್ಟು ಸರಾಸರಿ ತಿಂಗಳಿಗೆ ಒಂದು ಲಕ್ಷ ಕ್ವಿಂಟಲ್ ಆಗತ್ಯವಿದ್ದು ಇದಕ್ಕೆ ಬೇಕಾಗುವಷ್ಟು ಭತ್ತದ ಬೆಳೆ ಅವಳಿ ಜಿಲ್ಲೆಯಲ್ಲಿ ಲಭ್ಯವಿಲ್ಲದೇ ಇರುವುದರಿಂದ ಮೈಸೂರು, ಮಂಡ್ಯ ಮುಂತಾದೆಡೆಯಿಂದ ಜಯ ಮತ್ತು ಇನ್ನಿತರ ಭತ್ತದ ತಳಿಯ ಫಸಲನ್ನು ಸಂಗ್ರಹಿಸಿ ಕುಚಲಕ್ಕಿಯನ್ನು ತಯಾರಿಸುವ ಕುರಿತು ಮುಖ್ಯ ಮಂತ್ರಿಗಳಿಗೆ ಮನವಿ ಸಮರ್ಪಿಸಲಾಯಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ತಕ್ಷಣ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

ನಂತರ ವಿಧಾನಸೌಧದಲ್ಲಿ ಸಚಿವ ಕೋಟ ಅವರ ಕಛೇರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಶ್ರೀ ಉಮೇಶ್ ವಿ, ಕತ್ತಿ, ಮಾನ್ಯ ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್. ಅಂಗಾರ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾದ ಶ್ರೀ ಕಿರಣ್ ಕೊಡ್ಗಿ, ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಶ್ರೀ ಸಂಜೀವ ಮಠಂದೂರು ಮುಂತಾದ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಸಮಕ್ಷಮ ನಡೆದ ಸಭೆಯಲ್ಲಿ ಮುಂದಿನ ಒಂದು ವಾರಗಳಲ್ಲಿ ಕರಾವಳಿ ಜಿಲ್ಲೆಯ ಅಕ್ಕಿ ಗಿರಣಿ ಮಾಲೀಕರು ಮತ್ತು ಆಹಾರ ನಿಗಮದ ಅಧಿಕಾರಿಗಳು ಮತ್ತು ಅವಳ ಜಿಲ್ಲೆಯ ಜಿಲ್ಲಾಧಿಕಾರಿಗಳ ಸಮಕ್ಷಮ ಸಭೆ ನಡೆಸಿ ಕುಚಲಕ್ಕಿಯ ತಯಾರಿಕೆಗಾಗಿ ಭತ್ತದ ಖರೀದಿ, ಸಂಸ್ಕರಣೆ, ವಿತರಣೆ ಕುರಿತು ಸೂಕ್ತ ಮಾರ್ಗೋಪಾಯ ಕಂಡುಹಿಡಿಯಲು ಅಗತ್ಯ ಕ್ರಮಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸಚಿವ ಶ್ರೀ ಉಮೇಶ್ ವಿ, ಕತ್ತಿಯವರು ಸೂಚಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಉಪ ನಿರ್ದೇಶಕರು ಉಪಸ್ಥಿತರಿದ್ದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

8 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

9 hours ago