ಉಡುಪಿ: ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ರಾಜ್ಯ ಸರ್ಕಾರದ ನಿಲುವು ಈ ಬಾರಿಯ ಬಜೆಟ್ ನಲ್ಲೂ ಮುಂದುವರೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಜನತೆಯ ಅಭಿವದ್ಧಿ ಬೇಡಿಕೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ಒದಗಿಸಿಲ್ಲ, ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಬ್ರಹ್ಮಾವರ ಕೃಷಿ ಕಾಲೇಜು ಘೋಷಣೆಯ ಭರವಸೆ ಈಡೇರಿಲ್ಲ.
ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿಗೆ ಅಗತ್ಯ ಅನುದಾನ, ಪ್ರಾಕೃತಿಕ ವಿಕೋಪ ಪರಿಹಾರ ಮೊತ್ತ ಏರಿಕೆ, ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ, ನಾರಾಯಣ ಗುರು ಅಭಿವೃಧ್ದಿ ನಿಗಮಕ್ಕೆ ಅನುದಾನದ ಬಗ್ಗೆ ಯಾವುದೇ ಘೋಷಣೆ ಮಾಡದೇ ಸಿದ್ದರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ಬಗ್ಗೆ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…