ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬಿ ಸಮುದ್ರದಲ್ಲಿ ಗಾಳಿ ಒತ್ತಡ ಇರುವುದರಿಂದ ವಿವಿಧೆಡೆ ಗಾಳಿ ಮತ್ತು ಸಿಡಿಲಿನ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ಮಂಗಳವಾರ 33.5 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.4 ಡಿ.ಸೆ. ಇಳಿಕೆ ಮತ್ತು 25.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ಮಾ. 24ರಂದು ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ದ.ಕ. ಜಿಲ್ಲೆಯಲ್ಲಿ 39 ಡಿ.ಸೆ. ಮತ್ತು ಉಡುಪಿ ಜಿಲ್ಲೆಯಲ್ಲಿ 37.4 ಡಿ.ಸೆ. ತಾಪಮಾನ ದಾಖಲಾಗಿತ್ತು.
ಇದನ್ನೂ ಓದಿ:
ಕುಂದಾಪುರ, ಹಿರಿಯಡಕ, ಬೆಳ್ಳರ್ಪಾಡಿ, ಆತ್ರಾಡಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ವೇಳೆ ಗುಡುಗು, ಮಿಂಚಿನೊಂದಿಗೆ ಮಳೆ ಸುರಿದಿದೆ.
ಕಳೆದ ಕೆಲವು ದಿನಗಳಿಂದ ವಿಪರೀತ ಉಷ್ಣಾಂಶ ದಾಖಲಾಗಿತ್ತು. ಹವಾಮಾನ ಇಲಾಖೆ ವರದಿಯಂತೆ ಮುಂದಿನ ಕೆಲವು ದಿನಗಳವರೆಗೆ ಜಿಲ್ಲೆಯಲ್ಲಿ ಹವಾಮಾನ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.
ಕಡಬ ತಾಲೂಕು ಸಿರಿಬಾಗಿಲು ಪ್ರದೇಶದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ತಾಲೂಕಿನ ಇತರ ಕಡೆಗಳಲ್ಲಿ ಸಾಧಾರಣ ಮಳೆ ಸುರಿದಿದೆ.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…