Featured

ಕರಾವಳಿ ಜಿಲ್ಲೆಯ ಮಳೆ ಹಾನಿಗೆ ವಿಶೇಷ ಪರಿಹಾರ ಮಂಜೂರು ಮಾಡುವಂತೆ ಶಾಸಕರಿಂದ ಮುಖ್ಯಮಂತ್ರಿಗಳಿಗೆ ಮನವಿ – vishwanews24

ಕರಾವಳಿ ಜಿಲ್ಲೆಯ ಮಳೆ ಹಾನಿಗೆ ವಿಶೇಷ ಪರಿಹಾರ ಮಂಜೂರು ಮಾಡುವಂತೆ ಶಾಸಕರಿಂದ ಮುಖ್ಯಮಂತ್ರಿಗಳಿಗೆ ಮನವಿ

ಉಡುಪಿ: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಭಾರೀ ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದ ವ್ಯಾಪಕ ಹಾನಿಯಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಕರಾವಳಿ ಜಿಲ್ಲೆಗಳ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಮಾಡಿದರು.

ಪ್ರಾಕೃತಿಕ ವಿಕೋಪದಿಂದ ನೂರಾರು ಮರಗಳು ಬಿದ್ದು, ವಿದ್ಯುತ್ ಕಂಬಗಳಿಗೆ, ಮನೆಗಳಿಗೆ ಹಾನಿಯಾಗಿದ್ದು, ರಸ್ತೆ, ಮೋರಿ, ಶಾಲಾ ಕಟ್ಟಡಗಳು, ಕಾಲುಸಂಕಗಳು ಹಾಗೂ ಸೇತುವೆಗಳು ಹಾನಿಗೊಳಗಾಗಿವೆ.

ಕಳೆದ ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪದಡಿ ಅನುದಾನ ಬಿಡುಗಡೆಯಾಗದೆ, ಗ್ರಾಮೀಣ ರಸ್ತೆಗಳ ಸಮರ್ಪಕ ನಿರ್ವಹಣೆಯಿಲ್ಲದೆ ಸಂಚಾರ ದುಸ್ತರವಾಗಿದೆ. ಸಮುದ್ರ ತೀರದಲ್ಲಿ ಕಡಲು ಕೊರೆತದ ಸಮಸ್ಯೆ ಹಲವೆಡೆ ಕಾಣಿಸಿಕೊಂಡಿದೆ.

ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುತ್ತಿದ್ದು, ಮೇ ಮತ್ತು ಜೂನ್ ತಿಂಗಳುಗಳಲ್ಲಿ ದೇಶದಲ್ಲಿಯೇ ಅತ್ಯಧಿಕವಾಗಿ ದಾಖಲೆಯ ಮಳೆ ದಾಖಲಾಗಿದೆ.

ಬಹುತೇಕ ರಸ್ತೆಗಳು ಹೊಂಡಗಳಿಂದ ಕೂಡಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗಿರುತ್ತದೆ.

ರಸ್ತೆಗಳ ನಿರ್ವಹಣೆ ಹಾಗೂ ದುರಸ್ತಿಗೆ ಸಾಕಷ್ಟು ಅನುದಾನದ ಅಗತ್ಯವಿದ್ದು, ಈ ಬಗ್ಗೆ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ (ಉಡುಪಿ ಮತ್ತು ಮಂಗಳೂರು) ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತಲಾ ರೂ. 50 ಕೋಟಿ ವಿಶೇಷ ಅನುದಾನವನ್ನು ಪ್ರಾಕೃತಿಕ ವಿಕೋಪದಡಿ ಮಂಜೂರು ಮಾಡುವಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಪರವಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

1 hour ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

1 hour ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

1 hour ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

1 hour ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

2 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

2 hours ago