ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತು ಪಡಿಸಿ ರಾಜ್ಯದ ಬೇರೆ ಯಾವುದೇ ಸ್ಥಳಗಳಲ್ಲಿ ಕಂಬಳ ಆಯೋಜಿಸದಂತೆ ರಾಜ್ಯ ಸರಕಾರವನ್ನು ನಿರ್ಬಂಧಿಸಲು ಹೈಕೋರ್ಟ್ ನಿರಾಕರಿಸಿದೆ.
ಕರಾವಳಿ ಜಿಲ್ಲೆಗಳಾದ ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನು ಹೊರತು ಪಡಿಸಿ ರಾಜ್ಯದ ಬೇರೆ ಜಿಲ್ಲೆ ಅಥವಾ ಭಾಗಗಳಲ್ಲಿ ಕಂಬಳ ಆಯೋಜನೆ ನಿರ್ಬಂಧಿಸಲು ಸರಕಾರಕ್ಕೆ ನಿರ್ದೇಶಿಸಬೇಕು. ಪಿಲಿಕುಳ ಜೈವಿಕ ಉದ್ಯಾನ ವನದ (ನಿಸರ್ಗ ಧಾಮ) ಬಳಿ ಕಂಬಳ ಆಯೋಜನೆಗೆ ಅನುಮತಿ ನೀಡಬಾರದು ಎಂದು ಕೋರಿ “ಪೀಪಲ್ ಫಾರ್ಎಥಿಕಲ್ ಟ್ರಿಟಿ3⁄4ಂಟ್ ಆಫ್ ಅನಿಮಲ್’ (ಪೆಟಾ) 2024ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು.
ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿತು. ಸಾಂಪ್ರದಾಯಿಕ ಕ್ರೀಡೆಗಳು ವಹಿಸುವ ಮಹತ್ವದ ಪಾತ್ರವನ್ನು ಪರಿಗಣಿಸಿ ರಾಜ್ಯದಲ್ಲಿ ಕಂಬಳ ಅಥವಾ ಎತ್ತಿನಗಾಡಿ ಓಟದ ಸ್ಪರ್ಧೆಗೆ ವಿನಾಯಿತಿ ನೀಡುವುದು ಸೂಕ್ತವೆಂದು ಶಾಸಕಾಂಗವು ಪರಿಗಣಿಸಿ ಪ್ರಾಣಿಗಳ ಮೇಲಿನ ಹಿಂಸೆ ತಡೆ ಕಾಯ್ದೆಗೆ ಎರಡನೇ ತಿದ್ದುಪಡಿ ತರಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಜನರ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ನಿಟ್ಟಿನಲ್ಲಿ ಸಾಂಪ್ರದಾಯಿಕ ಕ್ರೀಡೆಯಾದ ‘ಕಂಬಳ’ ಅಥವಾ ‘ಎತ್ತುಗಳ ಓಟ’ ಅಥವಾ ‘ಎತ್ತಿನ ಬಂಡಿ ಓಟ’ ವಹಿಸಿದ ಮಹತ್ವದ ಪಾತ್ರವನ್ನು ಪರಿಗಣಿಸಿ ಹಾಗೂ ಸ್ಥಳೀಯ ತಳಿಗಳ ಜಾನುವಾರುಗಳ ಉಳಿವು ಮತ್ತು ಸಂರಕ್ಷಣೆ ಖಚಿತಪಡಿಸಿಕೊಳ್ಳುವಲ್ಲಿ ಕರ್ನಾಟಕ ಸರಕಾರವು ರಾಜ್ಯದಲ್ಲಿ ಕಂಬಳ ಅಥವಾ ಎತ್ತುಗಳ ಓಟ ಅಥವಾ ಎತ್ತಿನ ಬಂಡಿ ಓಟ ಆಯೋಜನೆಗೆ ಕಾಯ್ದೆಯಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಈ ಕಾರಣದಿಂದ, ದ.ಕ. ಮತ್ತು ಉಡುಪಿ ಜಿಲ್ಲೆಗಳ ಹೊರಗಿನ ಯಾವುದೇ ಸ್ಥಳದಲ್ಲಿ ಕಂಬಳ ಕ್ರೀಡೆ ಆಯೋಜಿಸದಂತೆ ಸರಕಾರವನ್ನು ನಿರ್ಬಂಧಿಸಬೇಕೆಂಬ ಅರ್ಜಿದಾರರ ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…