ಅಪರೇಷನ್ ಸಿಂಧೂರ ಕಾರ್ಯಾಚರಣೆಯ ಮುಂದುವರಿದ ಭಾಗವಾಗಿ ದೇಶದ ಕರಾವಳಿ ಜಿಲ್ಲೆಯ ಕಡಲ ತೀರ ಹಾಗೂ ಸಮುದ್ರ ಭಾಗದಲ್ಲಿ ನಿಗಾ ವಹಿಸಲು ರಕ್ಷಣಾ ಪಡೆಗಳಿಗೆ ಸಂಪೂರ್ಣ ಸಹಕಾರ ನೀಡಲು ಕರಾವಳಿ ಜಿಲ್ಲೆಯ ಮೀನುಗಾರರು ಸದಾ ಸಿದ್ಧವಾಗಿದ್ದರೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಕರ್ನಾಟಕ ಕರಾವಳಿಯ 330 ಕಿಲೋ ಮೀಟರ್ ವ್ಯಾಪ್ತಿಯ ಸಮುದ್ರ ತೀರ ಹಾಗೂ ಮೀನುಗಾರಿಕೆ ಸಂದರ್ಭದಲ್ಲಿ ಸಮುದ್ರದಲ್ಲಿ ನಿಗಾ ವಹಿಸಿ , ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಬೋಟ್ ಗಳ ಬಗ್ಗೆ ತಕ್ಷಣ ಮಾಹಿತಿ ನೀಡಲು ಈಗಾಗಲೇ ಮೀನುಗಾರರಿಗೆ ಮಾಹಿತಿ ನೀಡಲಾಗಿದೆ.
ಮೀನುಗಾರರು ಸದಾ ಕಡಲ ಸೈನಿಕರಂತೆ ದೇಶದ ರಕ್ಷಣೆಗೆ ಸದಾ ಬದ್ಧವಾಗಿದ್ದು, ಈಗಾಗಲೇ ಎಲ್ಲಾ ಬಂದರುಗಳ ಮೀನುಗಾರರ ಸಂಘದ ಮುಖಂಡರು ಮೀನುಗಾರರಿಗೆ ಅಗತ್ಯ ಮಾಹಿತಿ, ಸೂಚನೆಗಳನ್ನು ನೀಡಿದ್ದು ದೇಶದ ತುರ್ತು ಸಂದರ್ಭದಲ್ಲಿ ದೇಶ ಸೇವೆಗೆ ಸದಾ ಸಿದ್ಧರಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…