Featured

ಉಡುಪಿ : ಕರಾವಳಿ ತೀರದ ಮೇರು ಕಲೆ ಯಕ್ಷಗಾನಕ್ಕೆ ಮೊದಲ ರಾಷ್ಟ್ರಪ್ರಶಸ್ತಿಯನ್ನು ತಂದಿತ್ತ ಹಾರಾಡಿ ರಾಮಗಾಣಿಗರು – Vishwanews24

ಕರಾವಳಿ ತೀರದ ಮೇರು ಕಲೆ ಯಕ್ಷಗಾನಕ್ಕೆ ಮೊದಲ ರಾಷ್ಟ್ರಪ್ರಶಸ್ತಿಯನ್ನು ತಂದಿತ್ತ ಹಾರಾಡಿ ರಾಮಗಾಣಿಗರು

ಲೇ :ಸುರೇಂದ್ರ ಪಣಿಯೂರು
ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಳಿಯ ಹಾರಾಡಿಯಲ್ಲಿ 1902 ಮೇ 27 ರಂದು ಸುಬ್ಬಣ್ಣ ಗಾಣಿಗ ಮತ್ತು ಕೊಲ್ಲು ದಂಪತಿಗಳ 2 ನೇ ಪುತ್ರನಾಗಿ ಜನಿಸಿದ ರಾಮ ಗಾಣಿಗರ ವಿದ್ಯಾಭ್ಯಾಸ ಬೈಕಾಡಿಯ ಐಗಳ ಮಠದಲ್ಲಿ 2 ನೇ ತರಗತಿಯವರೆಗೆ ಮಾತ್ರ .
ತನ್ನ 14 ನೇ ವಯಸ್ಸಿನಲ್ಲಿ ಮಾರಣಕಟ್ಟೆ ಮೇಳದಲ್ಲಿ ಬಾಲಗೋಪಾಲನಾಗಿ ಮೊದಲು ಗೆಜ್ಜೆ ಕಟ್ಟಿ , ಯಕ್ಷಗಾನ ರಂಗಕ್ಕೆ ಪಾದಾರ್ಪಣೆ ಮಾಡಿದ ಅವರು . ಒಂದು ವರ್ಷದ ತಿರುಗಾಟದ ಬಳಿಕ ಇತಿಹಾಸ ಪ್ರಸಿದ್ಧ ಮಂದಾರ್ತಿ ಮೇಳಕ್ಕೆ ಸೇರ್ಪಡೆಗೊಂಡರು. ಆ ಮೇಳವೊಂದರಲ್ಲಿ 45 ವರ್ಷಗಳ ಸುಧೀರ್ಘ ಕಾಲ ತಿರುಗಾಟ ನಡೆಸಿದುದು ದಾಖಲೆಯಾಗಿದೆ.  ಪ್ರಖ್ಯಾತಿಯ ಉತ್ತುಂಗಕ್ಕೇರಿದ ಅವರು  . ಮಂದಾರ್ತಿ ಮೇಳ ಮಾತ್ರವಲ್ಲದೆ ಅಮೃತೇಶ್ವರಿ ಮೇಳ ಕೋಟ, ಅಂದಿನ ಕಾಲದ ವರಂಗ ಮೇಳ, ಸೌಕೂರು ಮೇಳ, ಸಾಲಿಗ್ರಾಮ ಮೇಳದಲ್ಲೂ ಕೆಲ ಕಾಲ ತಿರುಗಾಟ ಮಾಡಿದ್ದರು ಎನ್ನುವುದು ದಾಖಲೆಗಳಿಂದ ಲಭ್ಯವಾಗಿದೆ.
ಯಕ್ಷಗಾನ ಬಡಗು ನಡುತಿಟ್ಟನ್ನು ಬೆಳಗಿದ ಹಾರಾಡಿ ರಾಮಗಾಣಿಗರು ಕರ್ಣ,ಋತುಪರ್ಣ,ತಾಮ್ರಧ್ವಜ, ಅರ್ಜುನ , ಕೌಂಡ್ಲಿಕ, ಮಾರ್ತಾಂಡತೇಜ, ಭೀಮ ಹಿರಣ್ಯಕಶ್ಯಪು,ಜಾಂಬವ,ಭೀಷ್ಮ, ಅಂಗಾರವರ್ಮ, ಚಿತ್ರಸೇನ ಮೊದಲಾದ ಪಾತ್ರಗಳಿಂದ ಪ್ರಖ್ಯಾತರಾಗಿದ್ದರು.
ತನ್ನ ಜೀವಿತ ಕಾಲದಲ್ಲಿ ಕರಾವಳಿಯಲ್ಲಿ  ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ  ಅವರು ರಂಗದಲ್ಲೂ ನಿಜ ಜೀವನದಲ್ಲೂ ಆದರ್ಶಪ್ರಾಯ ವ್ಯಕ್ತಿಯಾಗಿದ್ದರು.
ತನ್ನ ಪಾತ್ರವೈಭವದ ಮೂಲಕ ಯಕ್ಷಗಾನ ಬಯಲಾಟ ರಂಗವನ್ನು ಶ್ರೀಮಂತಗೊಳಿಸಿದ್ದ ರಾಮಗಾಣಿಗರಿಗೆ 1961 ರಲ್ಲಿ ಮೈಸೂರು ರಾಜ್ಯ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ, 1962 ರಲ್ಲಿ ರಾಜ್ಯ ಪ್ರಶಸ್ತಿಯನ್ನು ಅಂದಿನ ಮುಖ್ಯಮಂತ್ರಿಗಳಾಗಿದ್ದ ಎಸ್‌.ನಿಜಲಿಂಗಪ್ಪನವರು ನೀಡಿ ಗೌರವಿಸಿದ್ದರು
1964 ರಲ್ಲಿ ಸರ್ವಪಲ್ಲಿ  ಡಾ.ರಾಧಾಕೃಷ್ಣನ್‌ ರವರು ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದರು. 1966ರಲ್ಲಿ ಪಾರ್ಶ್ವವಾಯು ಪೀಡಿತರಾದ ರಾಮಗಾಣಿಗರು 1968  ಡಿಸೆಂಬರ್‌ 11 ರಂದು ಇಹಲೋಕದ ಯಾತ್ರೆ ಮುಗಿಸಿದರು.
ಲೇ :ಸುರೇಂದ್ರ ಪಣಿಯೂರು
Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

2 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

2 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

2 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

6 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

6 hours ago