Featured

ಕರಾವಳಿ ದೈವಾರಾಧನೆ ಈಗ ಬೆಂಗಳೂರಿನಲ್ಲಿ – ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ? Vishwanews24

ಕರಾವಳಿ ದೈವಾರಾಧನೆ ಈಗ ಬೆಂಗಳೂರಿನಲ್ಲಿ – ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ?

ಮಂಗಳೂರು : ಕಾಂತಾರ ಸಿನೆಮಾ ಕರಾವಳಿಯ ದೈವಾರಾಧನೆ ಇಡೀ ವಿಶ್ವಕ್ಕೆ ಪರಿಚಯಿಸಿದ ಬೆನ್ನಲ್ಲೇ ಇದೀಗ ಕರಾವಳಿಗೆ ಮಾತ್ರ ಸೀಮಿತವಾಗಿದ್ದ ದೈವಸ್ಥಾನಗಳು ಹೊರ ಜಿಲ್ಲೆಗಳಲ್ಲೂ ಪ್ರಾರಂಭವಾಗಿದೆ.

ಕಾಂತಾರ ಸಿನಿಮಾ ಅಬ್ಬರದ ಓಟದ ಹಿಂದೆ ದೈವಶಕ್ತಿಯ ಪ್ರೇರಣೆ ಇದೆ ಅನ್ನೋದು ಚಿತ್ರತಂಡದ ಮಾತು. ಕರಾವಳಿಯ ಭಾಗದ ದೈವಾರಾಧನೆ ಸಂಸ್ಕೃತಿ ಈಗ ಇಡಿ ದೇಶಕ್ಕೆ ಚಿರಪರಿಚಿತವಾಗಿದೆ. ಆದರೆ ಈಗ ಬೆಂಗಳೂರಿನಲ್ಲಿ ಮಾತ್ರ ಹೊಸ ದೈವದ ವಿಚಾರದಲ್ಲಿ ದೊಡ್ಡ ಸಮರ ಶುರುವಾಗಿದೆ.

ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಈಗ ಕೊರಗಜ್ಜನ ದೈವಸ್ಥಾನ ಶುರುವಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಇದೇ ಭಾನುವಾರ ದೈವಕೋಲವೂ ನಡೆಯಲಿದೆ ಅಂತಾ ಆಮಂತ್ರಣ ಪತ್ರಿಕೆಯೂ ಶುರುವಾಗಿದೆ. ಇಲ್ಲಿ ಕೊರಗಜ್ಜನನ್ನು ಪ್ರತಿಷ್ಠಾಪಿಸಿದ ಕುಟುಂಬ ನಮಗೆ ಕೊರಗಜ್ಜ ಕನಸಲ್ಲಿ ಬಂದು ಇಲ್ಲಿ ನೆಲೆಯಾಗುತ್ತೇನೆ ಅಂತಾ ಹೇಳಿದ್ದು, ಕಲ್ಲು ಸಿಕ್ಕಿದೆ ಅನ್ನುತ್ತಿದ್ದಾರೆ. ಆದರೆ ಇದೆಲ್ಲವೂ ದುಡ್ಡಿನ ಬ್ಯುಸಿನೆಸ್ ಆಗಬಾರದು. ಕರಾವಳಿಯಲ್ಲಿ ದೈವಸ್ಥಾನ, ಭೂತಕೋಲ ನಡೆಯೋದು. ಅದನ್ನು ಬಿಟ್ಟು ಬೇರೆ ಕಡೆ ದುಡ್ಡಿಗಾಗಿ ದೈವ, ಕರಾವಳಿಯ ಭಕ್ತಿಯನ್ನು ಮಾರಾಟ ಮಾಡಲಾಗುತ್ತಿದೆ ಅಂತಾ ಕರಾವಳಿಯ ದೈವವನ್ನು ನಂಬುವ ಜನ ಕಿಡಿಕಾರುತ್ತಿದ್ದಾರೆ. ಹೀಗಾಗಿ ಕೊರಗಜ್ಜನನ್ನು ಪ್ರತಿಷ್ಠಾಪಿಸಿದ ಮಹಿಳೆಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ನಾಗಾರಾಧನೆ ಮತ್ತು ದೈವರಾದನೆಗಳು ತುಳುನಾಡಿನಲ್ಲಿ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಆಚರಣೆ. ಕಾಂತಾರ ಚಿತ್ರದ ನಂತರ ಮೈಸೂರು ಬೆಂಗಳೂರು ಭಾಗಗಳಲ್ಲೂ ದೈವಾರಾಧನೆ ಆರಂಭವಾಗಿದೆ. ಈ ವಿಚಾರ ಈಗ ಬಹು ಚರ್ಚೆಯಲ್ಲಿದೆ. ಕರಾವಳಿಯ ಮಣ್ಣಿನ ಸಂಸ್ಕೃತಿಯನ್ನು ದುರುಪಯೋಗಪಡಿಸಲಾಗುತ್ತಿದೆ ಎಂಬ ಕೂಗು ಎದ್ದಿದೆ. ನೀತಿ ನಿಯಮ ಸಂಪ್ರದಾಯ ಮತ್ತು ಕಟ್ಟುಕಟ್ಟಲೆಯನ್ನು ಮೀರಿ ಘಟ್ಟದ ಮೇಲೆ ಆಚರಣೆಗಳನ್ನು ನಡೆಸಬಾರದು. ಆಯಾಯ ಊರಿನ ಸಂಪ್ರದಾಯಗಳನ್ನು ಆ ಭಾಗದ ಜನರು ಆಚರಣೆ ಮಾಡಬೇಕು ಎಂದು ದೈವರಾದಕ ಮೋಹನ್ ಭಟ್ ಹೇಳಿದ್ದಾರೆ.

ಒಟ್ಟಿನಲ್ಲಿ ದೈವಕೋಲ ದೈವನರ್ತನ ಕರಾವಳಿಯಲ್ಲಿ ನಡೆಯಬೇಕು, ಅದನ್ನು ಹೊರತುಪಡಿಸಿ ಬೇರೆ ಕಡೆ ನಡೆದ್ರೇ ದೈವದ ಪವಾಡ ನಡೆಯಲ್ಲ. ಅದ್ರ ಶುದ್ಧತೆಗೆ ಧಕ್ಕೆ ಬರುತ್ತದೆ ಅನ್ನೋದು ಕರಾವಳಿ ದೈವ ಆರಾಧನೆ ಮಾಡುವವರ ಆಕ್ರೋಶವಾಗಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago