Featured

ಕರಾವಳಿ ದೈವಾರಾಧನೆ ಈಗ ಬೆಂಗಳೂರಿನಲ್ಲಿ – ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ? Vishwanews24

ಕರಾವಳಿ ದೈವಾರಾಧನೆ ಈಗ ಬೆಂಗಳೂರಿನಲ್ಲಿ – ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ?

ಮಂಗಳೂರು : ಕಾಂತಾರ ಸಿನೆಮಾ ಕರಾವಳಿಯ ದೈವಾರಾಧನೆ ಇಡೀ ವಿಶ್ವಕ್ಕೆ ಪರಿಚಯಿಸಿದ ಬೆನ್ನಲ್ಲೇ ಇದೀಗ ಕರಾವಳಿಗೆ ಮಾತ್ರ ಸೀಮಿತವಾಗಿದ್ದ ದೈವಸ್ಥಾನಗಳು ಹೊರ ಜಿಲ್ಲೆಗಳಲ್ಲೂ ಪ್ರಾರಂಭವಾಗಿದೆ.

ಕಾಂತಾರ ಸಿನಿಮಾ ಅಬ್ಬರದ ಓಟದ ಹಿಂದೆ ದೈವಶಕ್ತಿಯ ಪ್ರೇರಣೆ ಇದೆ ಅನ್ನೋದು ಚಿತ್ರತಂಡದ ಮಾತು. ಕರಾವಳಿಯ ಭಾಗದ ದೈವಾರಾಧನೆ ಸಂಸ್ಕೃತಿ ಈಗ ಇಡಿ ದೇಶಕ್ಕೆ ಚಿರಪರಿಚಿತವಾಗಿದೆ. ಆದರೆ ಈಗ ಬೆಂಗಳೂರಿನಲ್ಲಿ ಮಾತ್ರ ಹೊಸ ದೈವದ ವಿಚಾರದಲ್ಲಿ ದೊಡ್ಡ ಸಮರ ಶುರುವಾಗಿದೆ.

ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಈಗ ಕೊರಗಜ್ಜನ ದೈವಸ್ಥಾನ ಶುರುವಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಇದೇ ಭಾನುವಾರ ದೈವಕೋಲವೂ ನಡೆಯಲಿದೆ ಅಂತಾ ಆಮಂತ್ರಣ ಪತ್ರಿಕೆಯೂ ಶುರುವಾಗಿದೆ. ಇಲ್ಲಿ ಕೊರಗಜ್ಜನನ್ನು ಪ್ರತಿಷ್ಠಾಪಿಸಿದ ಕುಟುಂಬ ನಮಗೆ ಕೊರಗಜ್ಜ ಕನಸಲ್ಲಿ ಬಂದು ಇಲ್ಲಿ ನೆಲೆಯಾಗುತ್ತೇನೆ ಅಂತಾ ಹೇಳಿದ್ದು, ಕಲ್ಲು ಸಿಕ್ಕಿದೆ ಅನ್ನುತ್ತಿದ್ದಾರೆ. ಆದರೆ ಇದೆಲ್ಲವೂ ದುಡ್ಡಿನ ಬ್ಯುಸಿನೆಸ್ ಆಗಬಾರದು. ಕರಾವಳಿಯಲ್ಲಿ ದೈವಸ್ಥಾನ, ಭೂತಕೋಲ ನಡೆಯೋದು. ಅದನ್ನು ಬಿಟ್ಟು ಬೇರೆ ಕಡೆ ದುಡ್ಡಿಗಾಗಿ ದೈವ, ಕರಾವಳಿಯ ಭಕ್ತಿಯನ್ನು ಮಾರಾಟ ಮಾಡಲಾಗುತ್ತಿದೆ ಅಂತಾ ಕರಾವಳಿಯ ದೈವವನ್ನು ನಂಬುವ ಜನ ಕಿಡಿಕಾರುತ್ತಿದ್ದಾರೆ. ಹೀಗಾಗಿ ಕೊರಗಜ್ಜನನ್ನು ಪ್ರತಿಷ್ಠಾಪಿಸಿದ ಮಹಿಳೆಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ನಾಗಾರಾಧನೆ ಮತ್ತು ದೈವರಾದನೆಗಳು ತುಳುನಾಡಿನಲ್ಲಿ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಆಚರಣೆ. ಕಾಂತಾರ ಚಿತ್ರದ ನಂತರ ಮೈಸೂರು ಬೆಂಗಳೂರು ಭಾಗಗಳಲ್ಲೂ ದೈವಾರಾಧನೆ ಆರಂಭವಾಗಿದೆ. ಈ ವಿಚಾರ ಈಗ ಬಹು ಚರ್ಚೆಯಲ್ಲಿದೆ. ಕರಾವಳಿಯ ಮಣ್ಣಿನ ಸಂಸ್ಕೃತಿಯನ್ನು ದುರುಪಯೋಗಪಡಿಸಲಾಗುತ್ತಿದೆ ಎಂಬ ಕೂಗು ಎದ್ದಿದೆ. ನೀತಿ ನಿಯಮ ಸಂಪ್ರದಾಯ ಮತ್ತು ಕಟ್ಟುಕಟ್ಟಲೆಯನ್ನು ಮೀರಿ ಘಟ್ಟದ ಮೇಲೆ ಆಚರಣೆಗಳನ್ನು ನಡೆಸಬಾರದು. ಆಯಾಯ ಊರಿನ ಸಂಪ್ರದಾಯಗಳನ್ನು ಆ ಭಾಗದ ಜನರು ಆಚರಣೆ ಮಾಡಬೇಕು ಎಂದು ದೈವರಾದಕ ಮೋಹನ್ ಭಟ್ ಹೇಳಿದ್ದಾರೆ.

ಒಟ್ಟಿನಲ್ಲಿ ದೈವಕೋಲ ದೈವನರ್ತನ ಕರಾವಳಿಯಲ್ಲಿ ನಡೆಯಬೇಕು, ಅದನ್ನು ಹೊರತುಪಡಿಸಿ ಬೇರೆ ಕಡೆ ನಡೆದ್ರೇ ದೈವದ ಪವಾಡ ನಡೆಯಲ್ಲ. ಅದ್ರ ಶುದ್ಧತೆಗೆ ಧಕ್ಕೆ ಬರುತ್ತದೆ ಅನ್ನೋದು ಕರಾವಳಿ ದೈವ ಆರಾಧನೆ ಮಾಡುವವರ ಆಕ್ರೋಶವಾಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

2 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

3 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

3 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

3 hours ago