ಕರ್ನಾಟಕ ಕರಾವಳಿಗೆ ಸೋಮವಾರ ಮುಂಗಾರು ಪ್ರವೇಶವಾಗಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯಾದ್ಯಂತ ಪಸರಿಸಲಿದೆ. ಬಳಿಕ ಮಳೆಯ ತೀವ್ರತೆ ಜಾಸ್ತ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾನ್ಸೂನ್ ಪ್ರವೇಶ ಪರಿಣಾಮ ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನವಿಡೀ ಮೋಡಕವಿದ ವಾತಾವರಣ, ತುಂತುರು-ಸಾಧಾರಣ ಮಳೆ ಕಂಡುಬಂದಿದೆ. ಜೂನ್ 7ರ ಬಳಿಕ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿಗೆ ಮಾನ್ಸೂನ್ ಪ್ರವೇಶವಾಗಿದೆ. ಇನ್ನು ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಬಳಿಕ ಮಳೆ ಪ್ರಮಾಣ ತೀವ್ರವಾಗುವ ಸಾಧ್ಯತೆ ಇದೆ. ಜೂ.7ರ ಮಳೆ ಪ್ರಮಾಣ ನೋಡಿಕೊಂಡು ಮುಂದಿನ ತೀವ್ರತೆಯನ್ನು ಲೆಕ್ಕಹಾಕಬಹುದು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವಿಜ್ಞಾನಿ ಪ್ರೊ.ಎಸ್.ಎಸ್.ಎಂ. ಗಾವಸ್ಕರ್ ತಿಳಿಸಿದ್ದಾರೆ.
ಭಾರಿ ಮಳೆ ಮುನ್ಸೂಚನೆ: ಮುಂಗಾರು ಬಲಗೊಳ್ಳುತ್ತಿದ್ದು, ಜೂನ್ 7ರಿಂದ ಕೇರಳ, ಕರ್ನಾಟಕ ಮತ್ತು ಗೋವಾ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 10ರಿಂದ ಕರಾವಳಿ ಕರ್ನಾಟಕ, ಗೋವಾ, ಮುಂಬೈ ಕರಾವಳಿಯಲ್ಲಿ ಪ್ರವಾಹ ಮಾದರಿಯಲ್ಲಿ ಮಳೆ ಬರುವ ಸಾಧ್ಯತೆ ಇದೆ. ಜೂನ್ 5, 6ರಂದು ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡದಲ್ಲಿ ಗಾಳಿ ಮಳೆಯೊಂದಿಗೆ ಗುಡುಗು ಮಿಂಚು ಕಾಣಿಸಿಕೊಳ್ಳಲಿದೆ. ಬಳಿಕ ಮಳೆ ತೀವ್ರತೆ ಜಾಸ್ತಿಯಾಗಲಿದ್ದು, ಜೂನ್ 9ರವರೆಗೆ ನಿರಂತರ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಗಾಳಿ ಜತೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ವರದಿ ತಿಳಿಸಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…