ಕರ್ನಾಟಕ ಕರಾವಳಿಗೆ ಸೋಮವಾರ ಮುಂಗಾರು ಪ್ರವೇಶವಾಗಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯಾದ್ಯಂತ ಪಸರಿಸಲಿದೆ. ಬಳಿಕ ಮಳೆಯ ತೀವ್ರತೆ ಜಾಸ್ತ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾನ್ಸೂನ್ ಪ್ರವೇಶ ಪರಿಣಾಮ ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನವಿಡೀ ಮೋಡಕವಿದ ವಾತಾವರಣ, ತುಂತುರು-ಸಾಧಾರಣ ಮಳೆ ಕಂಡುಬಂದಿದೆ. ಜೂನ್ 7ರ ಬಳಿಕ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿಗೆ ಮಾನ್ಸೂನ್ ಪ್ರವೇಶವಾಗಿದೆ. ಇನ್ನು ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಬಳಿಕ ಮಳೆ ಪ್ರಮಾಣ ತೀವ್ರವಾಗುವ ಸಾಧ್ಯತೆ ಇದೆ. ಜೂ.7ರ ಮಳೆ ಪ್ರಮಾಣ ನೋಡಿಕೊಂಡು ಮುಂದಿನ ತೀವ್ರತೆಯನ್ನು ಲೆಕ್ಕಹಾಕಬಹುದು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವಿಜ್ಞಾನಿ ಪ್ರೊ.ಎಸ್.ಎಸ್.ಎಂ. ಗಾವಸ್ಕರ್ ತಿಳಿಸಿದ್ದಾರೆ.
ಭಾರಿ ಮಳೆ ಮುನ್ಸೂಚನೆ: ಮುಂಗಾರು ಬಲಗೊಳ್ಳುತ್ತಿದ್ದು, ಜೂನ್ 7ರಿಂದ ಕೇರಳ, ಕರ್ನಾಟಕ ಮತ್ತು ಗೋವಾ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 10ರಿಂದ ಕರಾವಳಿ ಕರ್ನಾಟಕ, ಗೋವಾ, ಮುಂಬೈ ಕರಾವಳಿಯಲ್ಲಿ ಪ್ರವಾಹ ಮಾದರಿಯಲ್ಲಿ ಮಳೆ ಬರುವ ಸಾಧ್ಯತೆ ಇದೆ. ಜೂನ್ 5, 6ರಂದು ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡದಲ್ಲಿ ಗಾಳಿ ಮಳೆಯೊಂದಿಗೆ ಗುಡುಗು ಮಿಂಚು ಕಾಣಿಸಿಕೊಳ್ಳಲಿದೆ. ಬಳಿಕ ಮಳೆ ತೀವ್ರತೆ ಜಾಸ್ತಿಯಾಗಲಿದ್ದು, ಜೂನ್ 9ರವರೆಗೆ ನಿರಂತರ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಗಾಳಿ ಜತೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ವರದಿ ತಿಳಿಸಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…