ಕರ್ನಾಟಕ ಕರಾವಳಿಗೆ ಸೋಮವಾರ ಮುಂಗಾರು ಪ್ರವೇಶವಾಗಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯಾದ್ಯಂತ ಪಸರಿಸಲಿದೆ. ಬಳಿಕ ಮಳೆಯ ತೀವ್ರತೆ ಜಾಸ್ತ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾನ್ಸೂನ್ ಪ್ರವೇಶ ಪರಿಣಾಮ ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನವಿಡೀ ಮೋಡಕವಿದ ವಾತಾವರಣ, ತುಂತುರು-ಸಾಧಾರಣ ಮಳೆ ಕಂಡುಬಂದಿದೆ. ಜೂನ್ 7ರ ಬಳಿಕ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿಗೆ ಮಾನ್ಸೂನ್ ಪ್ರವೇಶವಾಗಿದೆ. ಇನ್ನು ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಬಳಿಕ ಮಳೆ ಪ್ರಮಾಣ ತೀವ್ರವಾಗುವ ಸಾಧ್ಯತೆ ಇದೆ. ಜೂ.7ರ ಮಳೆ ಪ್ರಮಾಣ ನೋಡಿಕೊಂಡು ಮುಂದಿನ ತೀವ್ರತೆಯನ್ನು ಲೆಕ್ಕಹಾಕಬಹುದು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವಿಜ್ಞಾನಿ ಪ್ರೊ.ಎಸ್.ಎಸ್.ಎಂ. ಗಾವಸ್ಕರ್ ತಿಳಿಸಿದ್ದಾರೆ.
ಭಾರಿ ಮಳೆ ಮುನ್ಸೂಚನೆ: ಮುಂಗಾರು ಬಲಗೊಳ್ಳುತ್ತಿದ್ದು, ಜೂನ್ 7ರಿಂದ ಕೇರಳ, ಕರ್ನಾಟಕ ಮತ್ತು ಗೋವಾ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 10ರಿಂದ ಕರಾವಳಿ ಕರ್ನಾಟಕ, ಗೋವಾ, ಮುಂಬೈ ಕರಾವಳಿಯಲ್ಲಿ ಪ್ರವಾಹ ಮಾದರಿಯಲ್ಲಿ ಮಳೆ ಬರುವ ಸಾಧ್ಯತೆ ಇದೆ. ಜೂನ್ 5, 6ರಂದು ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡದಲ್ಲಿ ಗಾಳಿ ಮಳೆಯೊಂದಿಗೆ ಗುಡುಗು ಮಿಂಚು ಕಾಣಿಸಿಕೊಳ್ಳಲಿದೆ. ಬಳಿಕ ಮಳೆ ತೀವ್ರತೆ ಜಾಸ್ತಿಯಾಗಲಿದ್ದು, ಜೂನ್ 9ರವರೆಗೆ ನಿರಂತರ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಗಾಳಿ ಜತೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ವರದಿ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…