ಕರ್ನಾಟಕ ಕರಾವಳಿಗೆ ಸೋಮವಾರ ಮುಂಗಾರು ಪ್ರವೇಶವಾಗಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯಾದ್ಯಂತ ಪಸರಿಸಲಿದೆ. ಬಳಿಕ ಮಳೆಯ ತೀವ್ರತೆ ಜಾಸ್ತ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾನ್ಸೂನ್ ಪ್ರವೇಶ ಪರಿಣಾಮ ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನವಿಡೀ ಮೋಡಕವಿದ ವಾತಾವರಣ, ತುಂತುರು-ಸಾಧಾರಣ ಮಳೆ ಕಂಡುಬಂದಿದೆ. ಜೂನ್ 7ರ ಬಳಿಕ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿಗೆ ಮಾನ್ಸೂನ್ ಪ್ರವೇಶವಾಗಿದೆ. ಇನ್ನು ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಬಳಿಕ ಮಳೆ ಪ್ರಮಾಣ ತೀವ್ರವಾಗುವ ಸಾಧ್ಯತೆ ಇದೆ. ಜೂ.7ರ ಮಳೆ ಪ್ರಮಾಣ ನೋಡಿಕೊಂಡು ಮುಂದಿನ ತೀವ್ರತೆಯನ್ನು ಲೆಕ್ಕಹಾಕಬಹುದು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವಿಜ್ಞಾನಿ ಪ್ರೊ.ಎಸ್.ಎಸ್.ಎಂ. ಗಾವಸ್ಕರ್ ತಿಳಿಸಿದ್ದಾರೆ.
ಭಾರಿ ಮಳೆ ಮುನ್ಸೂಚನೆ: ಮುಂಗಾರು ಬಲಗೊಳ್ಳುತ್ತಿದ್ದು, ಜೂನ್ 7ರಿಂದ ಕೇರಳ, ಕರ್ನಾಟಕ ಮತ್ತು ಗೋವಾ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 10ರಿಂದ ಕರಾವಳಿ ಕರ್ನಾಟಕ, ಗೋವಾ, ಮುಂಬೈ ಕರಾವಳಿಯಲ್ಲಿ ಪ್ರವಾಹ ಮಾದರಿಯಲ್ಲಿ ಮಳೆ ಬರುವ ಸಾಧ್ಯತೆ ಇದೆ. ಜೂನ್ 5, 6ರಂದು ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡದಲ್ಲಿ ಗಾಳಿ ಮಳೆಯೊಂದಿಗೆ ಗುಡುಗು ಮಿಂಚು ಕಾಣಿಸಿಕೊಳ್ಳಲಿದೆ. ಬಳಿಕ ಮಳೆ ತೀವ್ರತೆ ಜಾಸ್ತಿಯಾಗಲಿದ್ದು, ಜೂನ್ 9ರವರೆಗೆ ನಿರಂತರ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಗಾಳಿ ಜತೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ವರದಿ ತಿಳಿಸಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…