Featured

ಕರಾವಳಿ ಬಿಜೆಪಿಯ ಬಹುತೇಕ ಖಚಿತಗೊಂಡ ಅಭ್ಯರ್ಥಿಗಳ ಪಟ್ಟಿ:ಲಾಲಾಜಿ-ರಘುಪತಿಭಟ್-ಸುಕುಮಾರ್ ಶೆಟ್ಟಿ, ಭರತ್ ಶೆಟ್ಟಿ ಔಟ್-ಉಮನಾಥ್ , ವೇದವ್ಯಾಸ ಕಾಮತ್,ಹಾಲಾಡಿ ಡೌಟ್

ಕರಾವಳಿ ಬಿಜೆಪಿಯ ಬಹುತೇಕ ಖಚಿತಗೊಂಡ ಅಭ್ಯರ್ಥಿಗಳ ಪಟ್ಟಿ:ಲಾಲಾಜಿ-ರಘುಪತಿಭಟ್-

ಸುಕುಮಾರ್ ಶೆಟ್ಟಿ, ಭರತ್ ಶೆಟ್ಟಿ ಔಟ್ – ಉಮನಾಥ್ , ವೇದವ್ಯಾಸ ಕಾಮತ್,ಹಾಲಾಡಿ ಡೌಟ್

ಪೊಲಿಟಿಕಲ್ ವರದಿ ಬೆಂಗಳೂರು

2023 ನೇ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಜೆಪಿ ಕರಾವಳಿಯ ಪಟ್ಟಿ ಬಹತೇಕ ಖಚಿತಗೊಂಡಿರುವ ಮಾಹಿತಿ ಹೊರಬಿದ್ದಿದ್ದು ಈ ನಡುವೆ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಸಿಗುವ ಅನುಮಾನ ವ್ಯಕ್ತವಾಗಿದೆ.ಬಿಜೆಪಿಯ ಎರಡನೇ ಹಂತದ ನಾಯಕರಿಗೆ ಮಣೆ ಹಾಕುವ ಉದ್ದೇಶದಿಂದ ಹಾಲಿ ಶಾಸಕರನ್ನು ಕೈ ಬಿಡುವ ನಿರ್ಧಾರಕ್ಕೆ ಸಂಘ ಹಾಗೂ ಬಿಜೆಪಿ ನಿರ್ಧಾರಮಾಡಿದೆ ಎನ್ನಲಾಗುತ್ತಿದೆ.

ದೆಹಲಿ ಮಟ್ಟದಲ್ಲಿ ಈಗಾಗಲೇ ಎರಡು ಸುತ್ತಿನ ಮಾತುಕತೆಯಲ್ಲಿ ಕೂಡ ಇದೇ ಅಭಿಪ್ರಾಯ ಮುಂಚೂಣಿಗೆ ಬಂದಿದ್ದು ಹಾಲಿ ಶಾಸಕರನ್ನು ಬದಿಗಿರಿಸಿ ಹೊಸ ಮುಖಗಳಿಗೆ ಅವಕಾಶನೀಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಾರ್ಕಳ ಹೊರತು ಪಡಿಸಿ ಕುಂದಾಪುರಲ್ಲಿ ಹಾಲಾಡಿ ಅಭಿಪ್ರಾಯದಂತೆ ಟಿಕೆಟ್ ನೀಡುವುದಾಗಿದ್ದು ಕಾಪು-ಉಡುಪಿ-ಬೈಂದೂರು ಬಹುತೇಕ ಬದಲಾವಣೆಯಾಗುವ ಸಾಧ್ಯತೆ ಇದೆ.

ಸರ್ವೆ ಕಾರ್ಯದ ಪ್ರಕಾರ ಬಿಜೆಪಿ ಉಡುಪಿ ಜಿಲ್ಲೆಯಲ್ಲಿ ಬಲಿಷ್ಟವಾಗಿದ್ದು ಹಾಲಿ ಶಾಸಕರ ಬಗ್ಗೆ ಅಸಾಮಧಾನ ಹೊರ ಬಿದ್ದಿರುವ ಪರಿಣಾಮವಾಗಿ ಈ ನಿರ್ಧಾರ ಪಡೆಯಲು ಸಂಘ ಬಿಜೆಪಿ ನಿರ್ಧರಿಸಿದೆ. ಈ ಬಾರಿ ಬದಲಾವಣೆ ಮಾಡದೇ ಇದ್ದಲ್ಲಿ ಮುಂದಿನ ಚುನಾವಣೆಯ ಹೊಸ್ತಿಲಲ್ಲಿ ಎರಡನೇ ಹಂತದ ನಾಯಕರು ಮೂಲೆಗುಂಪಾಗುವ ಸಾಧ್ಯತೆ ಹೆಚ್ಚಿದ್ದು ಇದು ಸಂಘಟನೆಯ ವೈಫಲ್ಯತೆಗೆ ಕಾರಣವಾಗಬಹುದು ಹಾಗಾಗಿ ಬದಲಾವಣೆ ಕಟ್ಟಿಟ್ಟ ಬುತ್ತಿಯಾಗಿದೆ.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ರಘುಪತಿ ಅವರು ಸೋಲಿಲ್ಲದ ಸರದಾರ ಆದರೇ ಕಳೆದ ಒಂದು ಚುನಾವಣೆಯಲ್ಲಿ ಲೈಂಗಿಕ ಪ್ರಕರಣದ ಮುಜುಗರದಿಂದ ಚುನಾವಣೆ ಸ್ಪರ್ಧಿಸದೇ ಹೊರಗುಳಿದಿದ್ದರು ಆದರೇ ಮತ್ತೇ ಅದೇ ವಾಸನೆ ಮುಂದುವರಿದ ಪರಿಣಾಮವಾಗಿ ಭಟ್ರಿಗೆ ಟಿಕೆಟ್ ಕೊಡಬಾರದೆಂಬ ಕೂಗು ದೆಹಲಿಯ ಬಾಗಿಲು ತಟ್ಟಿದೆ ಆ ಪರಿಣಾಮವಾಗಿ ಹೊಸ ಮುಖವನ್ನು ಈ ಪ್ರಯೋಗ ಮಾಡುವ ಮುಖೇನ ಜಿಲ್ಲಾ ಬಿಜೆಪಿಯನ್ನು ಕಟ್ಟುವ ಕೆಲಸ ಸಂಘ ಮಾಡಲಿದೆ.

ಇನ್ನೂ ಕಾಪುವಿನಲ್ಲಿ ಸತತವಾಗಿ ಲಾಲಾಜಿ ಹೊರತು ಪಡಿಸಿದರೆ ಬಿಜೆಪಿ ಯಾವುದೇ ಹೊಸ ಮುಖವನ್ನು ಇದುವರೆಗೆ ಪ್ರಯೋಗ ಮಾಡಿಲ್ಲ ಆ ಪರಿಣಾಮವಾಗಿ ಎರಡನೇ ಹಂತದ ನಾಯಕರು ಈಗಾಗಲೇ ಮೂಲೆ ಸೇರಿದ್ದು ಮೂರನೇ ಹಂತದ ನಾಯಕರು ಸದ್ಯ ಹೆಮ್ಮರವಾಗಿ ಪಕ್ಷ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾರೆ ಅಂತವರಿಗೆ ಟಿಕೆಟ್ ನೀಡ ಬೇಕು ಎಂಬ ಕೂಗು ಕೇಳಿ ಬರುತ್ತಿದೆ ಮಾತ್ರವಲ್ಲದೆ ಕ್ಷೇತ್ರದಲ್ಲಿ ಮಿತಿಮೀರಿದ ಭ್ರಷ್ಟಚಾರ, ಹಿಂದೂ ಕಾರ್ಯಕರ್ತರಿಗೆ ಬಿದ್ದ ಹೊಡೆತ, ಗೋವು ಕಳವು ಪ್ರಕರಣ ನಡೆದರೂ ಕೂಡ ಕ್ಷೇತ್ರದಲ್ಲಿ ಬಿಜೆಪಿ ಭಧ್ರವಾಗಿದೆ ಆದರೇ ಈ ಸಲ ಮಾತ್ರ ಹೊಸ ಮುಖವನ್ನು ಬಿಜೆಪಿ ಜನತೆಯ ಮುಂದೆ ಇಡದೇ ಇದ್ದಲ್ಲಿ ಜಿಲ್ಲೆಯಲ್ಲಿ ಒಂದು ಕ್ಷೇತ್ರವನ್ನು ಕಾಂಗ್ರೇಸ್ ಗೆ ಸುಲಭವಾಗಿ ಧಾರೆ ಎಳೆದುಕೊಡಬೇಕಾಗುತ್ತೆಂಬ ಮಾತು ಜೋರಾಗಿ ಕೇಳಿ ಬರುವ ಪರಿಣಾಮವಾಗಿ ಲಾಲಾಜಿ ಈ ಸಲ ಔಟ್ ಆಗುವ ಸಾಧ್ಯತೆ ಹೆಚ್ಚಿದೆ.

ಬೈಂದೂರು ಭಾಗದಲ್ಲಿ ಸುಕುಮಾರ್ ಶೆಟ್ಟಿಯ ಮುನಿಸು ಪಕ್ಷಕ್ಕೆ ದೊಡ್ಡ ಮಟ್ಟದಲ್ಲಿ ಪೆಟ್ಟು ಕೊಟ್ಟಿದೆ ಒಂದು ಲೆಕ್ಕಚಾರದ ಪ್ರಕಾರ ಬೈಂದೂರು ಈ ಸಲದ ಮಟ್ಟಿಗೆ ಕಾಂಗ್ರೇಸ್ ಸುಲಭವಾಗಿ ಗೆಲುವು ಸಾಧಿಸಬಹದು ಕಾರಣ ಬಿಲ್ಲವ-ಮೊಗವೀರ-ದೇವಾಡಿಗ ಮತದಾರರಿಗೆ ಸುಕುಮಾರ್ ಶೆಟ್ಟಿಯಿಂದ ಅನ್ಯಾಯವಾಗಿದೆಂಬ ಮಾತು ಬಹಿರಂಗವಾಗಿಯೇ ಕೇಳಿ ಬಂದಿರುವ ಪರಿಣಾಮವಾಗಿ ಸುಕುಮಾರ್ ಶೆಟ್ಟಿಯ ಬದಲಾವಣೆ ಅಗತ್ಯವಾಗಿದೆಂದು ಸಂಘ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಕುಂದಾಪುರ ಹಾಲಾಡಿ ಶ್ರೀನಿವಾಸ ಶೆಟ್ಟಿಯ ಹಿಡಿತದಲ್ಲಿರುವ ವಿಧಾನಸಭಾ ಕ್ಷೇತ್ರ ಇಲ್ಲಿ ಯಾವುದೇಪ್ರಯೋಗ ಮಾಡಬೇಕಾದರೂ ಅಂತಿಮವಾಗಿ ಹಾಲಾಡಿ ಸಹಿ ಹಾಕಿದರೆಮಾತ್ರ ಸಾಧ್ಯ ಹಾಗಾಗಿ ಈ ವ್ಯಕ್ತಿಯ ಕೃಪಾಕಟಾಕ್ಷ ಯಾರ ಮೇಲಿದೆಯೋ ಅವರೇ ಆ ಭಾಗದಲ್ಲಿ ಗೆಲುವು ಸಾಧಿಸುವುದಾಗಿದೆ ಹಾಗಾಗಿ ಈ ಕ್ಷೇತ್ರದ ಲೆಕ್ಕಚಾರದ ಬಗ್ಗೆ ಸಂಘ ಬಿಜೆಪಿ ಎಂತಹ ಫ್ಲ್ಯಾನ್ ಮಾಡಿದ್ದರೂ ಕೂಡ ಅದನ್ನ ತಲೆಕೆಳಗಾಗಿಸುವ ತಾಕತ್ತು ಹಾಲಾಡಿಗೆ ಇರುವುದರಿಂದ ಸದ್ಯ ಯಥಾಸ್ಥತಿ ಕಾಪಾಡಿಕೊಂಡು ಹೋಗುವ ಸಾಧ್ಯತೆ ಇದೆ.

ಮೂಡಬಿದಿರೆಯಲ್ಲಿ ಉಮನಾಥ ಕೋಟ್ಯಾನ್ ಬದಲು ನಳಿನ್ ಆಪ್ತನಿಗೆ ಟಿಕೆಟ್ ಸಿಗುವುದು ಬಹುತೇಕ ದಿಟವಾಗಿದೆ ಮಿಥುನ್ ರೈ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಪರಿಣಾಮವಾಗಿ ನಳಿನ್ ತನ್ನ ಪ್ರಭಾವ ಬಳಸಿಕೊಂಡು ತನ್ನ ಆಪ್ತ ವರ್ಗಕ್ಕೆ ಟಿಕೆಟ್ ಕೊಡುವ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಭರತ್ ಶೆಟ್ಟಿ ಮಂಗಳೂರು ನಗರ ಉತ್ತರದಿಂದ ಗೆದ್ದು ಬಂದವರು ಆದರೇ ಇವರಿಗೂ ಈ ಬಾರಿ ಟಿಕೆಟ್ ನೀಡುವ ಸಾಧ್ಯತೆಯಿಲ್ಲ ಈ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ಆರಂಭವಾಗಿದ್ದು ಈ ಕ್ಷೇತ್ರದಲ್ಲಿ ಮಹಿಳೆಗೆ ಟಿಕೆಟ್ ನೀಡುವ ಕುರಿತಾಗಿ ಮಾತುಕತೆ ನಡೆದಿದೆ. ವೇದವ್ಯಾಸ ಕಾಮತ್ ಬದಲಿಗೆ ಮತ್ತೊಂದು ಹೊಸ ಜಿಎಸ್ಬಿ ಮುಖವನ್ನು ಈ ಸಲ ಕಣಕ್ಕಿಳಿಸುವ ಇರಾದೆ ಇರುವ ಪರಿಣಾಮವಾಗಿ ಮಂಗಳೂರು ದಕ್ಷಿಣ ಹಾಗೂ ಪುತ್ತೂರು ಸಂಜೀವ ಮಠಂದೂರು ಅವರಿಗೆ ಬಿಜೆಪಿ ಕೋಕ್ ಕೊಡಲು ನಿರ್ಧರಿಸಿದೆ.

ಒಟ್ಟಾರೆಯಾಗಿ ೨೦೨೩ ನೇ ಸಾಲಿನ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿಯ ಕ್ಷೇತ್ರಗಳು ಇ ಸಲದ ಮಟ್ಟಿಗೆ ಬದಲಾವಣೆಯ ಪರ್ವವಾಗುವ ಸಾಧ್ಯತೆ ಹೆಚ್ಚಾಗಿದೆ.

Vishwa News 24

Recent Posts

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

37 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

59 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

2 hours ago