Featured

ಕರಾವಳಿ ಭಾಗದಲ್ಲಿ ಮಂಗಗಳ ಶವ ಪತ್ತೆ : ಮಂಗನ ಕಾಯಿಲೆಗೆ ಸಾರ್ವಜನಿಕರಲ್ಲಿ ಆತಂಕ‌

ಉಡುಪಿ: ಮಲೆನಾಡಿನಲ್ಲಿ ಮಂಗನ ಕಾಯಿಲೆ ಹರಡಿ ಜನರು ಸಾವಿಗೀಡಾಗುತ್ತಿರುವ ಘಟನೆ ನಡೆಯುತ್ತಿರುವಾಗಲೇ ಇದೀಗ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರಿನಲ್ಲಿ ಎರಡು ಮಂಗಗಳ ಶವ ಮತ್ತು ಶಿವಮೊಗ್ಗ ಜಿಲ್ಲೆಯ ಸಿದ್ದಾಪುರದಲ್ಲಿ ಒಂದು ಹೆಣ್ಣು ಮಂಗದ ಶವ ಪತ್ತೆಯಾಗಿದೆ.

ಜಿಲ್ಲೆಯ ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಸಿದ್ದಾಪುರ ಕಾಡಲ್ಲಿ ಈವರೆಗೆ 9 ಮತ್ತು ಹಳ್ಳಿಹೊಳೆಯಲ್ಲಿ 2 ಮಂಗನ ಕಳೇಬರ ಪತ್ತೆಯಾಗಿದೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿ ಆರೋಗ್ಯ ಅಧಿಕಾರಿಗಳು ಮೃತ ಕೋತಿಯ ದೇಹದ ಕೆಲವು ಭಾಗಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಟ್ಟಿದ್ದಾರೆ

ಸದ್ಯ ಮಂಗನ ಸಾವು ಸಾರ್ವಜನಿಕರಲ್ಲಿ ಆತಂಕ‌ ಮೂಡಿಸಿದೆ. ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಕೋತಿಯ ದೇಹದ ಕೆಲವು ಭಾಗಗಳನ್ನು ಆರೋಗ್ಯಾಧಿಕಾರಿಗಳು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಡಲಾಗಿದೆ. ಸಿದ್ದಾಪುರದ ಬಳಿ ಸಿಕ್ಕ ಮಂಗನ ಶವವನ್ನು ಇಲಾಖೆಯ ಸಿಬ್ಬಂದಿ ತಪಾಸಣೆಗೆ ಬೇಕಾದ ಭಾಗಗಳನ್ನು ಸಂಗ್ರಹಿಸಿ, ಶಿವಮೊಗ್ಗದ ಲ್ಯಾಬ್​ಗೆ ಕಳುಹಿಸಿದ್ದಾರೆ. ಬಳಿಕ ಶವದ ಪೋಸ್ಟ್​ಮಾರ್ಟಂ ಮಾಡಿ ದಹಿಸಲಾಗಿದೆ.

ಉಡುಪಿ ಜಿಲ್ಲೆಯ ಕೆಎಂಸಿ ಆಸ್ಪತ್ರೆಯಲ್ಲಿ 42 ಮಂಗನ ಕಾಯಿಲೆ ಶಂಕಿತ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ 14 ಮಂದಿಗೆ ಕಾಯಿಲೆ ಇರುವುದು ದೃಢಪಟ್ಟಿದೆ.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 minutes ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

33 minutes ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

49 minutes ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

1 hour ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

1 hour ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

1 hour ago