ಮಂಗಳೂರು: ಕರಾವಳಿ ಸುರಿಯುತ್ತಿರುವ ಭಾರಿ ಮಳೆ ಜೊತೆಗೆ ಕಡಲ ಅಬ್ಬರವೂ ಹೆಚ್ಚಾಗಿದೆ. ಭಾರೀ ಮಳೆಯ ಕಾರಣ ಕಡಲು ತೀರಗಳಲ್ಲಿ ಅಲೆಗಳ ಆರ್ಭಟ ಹೆಚ್ಚಾಗುತ್ತಿದೆ. ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ ಕಡಲ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ.
ಉಚ್ಚಿಲ- ಬಟ್ಟಪ್ಪಾಡಿ ಸಂಪರ್ಕಿಸುವ ರಸ್ತೆ ಬಹುತೇಕ ಕುಸಿದುಬಿದ್ದಿದೆ. ಕಡಲ್ಕೊರೆತ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ತೀರದಲ್ಲಿರುವ ನಾಲ್ಕೈದು ಕುಟುಂಬಗಳು ತಮ್ಮ ಮನೆಯಿಂದ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. ಕಡಲ ತೀರದ ಹತ್ತಾರು ಮನೆಗಳು ಕುಸಿದು ಬೀಳುವ ಅಪಾಯದಲ್ಲಿದೆ.
ಈ ನಡುವೆ ಮಂಗಳೂರಿನಿಂದ ಕಾರವಾರದವರೆಗಿನ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಇಂದು ರಾತ್ರಿ 11:30ರವರೆಗೆ ಬಲವಾದ ಗಾಳಿ ಬೀಸಲಿದ್ದು, ಇದರಿಂದ ಅರಬಿಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ದಡವನ್ನು ಅಪ್ಪಳಿಸಲಿದೆ ಎಂದು ಭಾರತ ಹವಾಮಾನ ಇಲಾಖೆ ಹಾಗೂ ಬೆಂಗಳೂರಿನ ವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ. ಕರ್ನಾಟಕ ಕರಾವಳಿಯುದ್ದಕ್ಕೂ ಗಂಟೆಗೆ 50 ರಿಂದ 60 ಕಿಲೋ ಮೀಟರ್ ವೇಗದ ಗಾಳಿ ಬೀಸುವ ಸಂಭವವಿದ್ದು, ಇದರಿಂದ 3.5ರಿಂದ 5.7ಮಿ. ಎತ್ತರದ ಅಲೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಪಶ್ಚಿಮ ಕರಾವಳಿಯ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಅದು ತಿಳಿಸಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…