Featured

ಕರಾವಳಿ ಸೇರಿದಂತೆ ರಾಜ್ಯದಲ್ಲಿ 24 ಮತ್ತು 25ರಂದು ಭಾರೀ ಮಳೆಯ ಸಾಧ್ಯತೆ -Vishwanews24

ಮಂಗಳೂರು: ರಾಜ್ಯಕ್ಕೆ ಹಿಂಗಾರು ಮಾರುತಗಳ ಅಬ್ಬರ ಜೊರಾಗಿಯೇ ಮುಂದುವರೆದಿದ್ದು, ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇನ್ನು ಮೂರು ನಾಲ್ಕು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಕನ್ನಡದಲ್ಲಿ ಹಾಗೂ ಬೆಳಗಾವಿಯಲ್ಲಿ 24 ಮತ್ತು 25ರಂದು ಭಾರೀ ಮಳೆಯ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ, ಜಿಲ್ಲೆಗಳಲ್ಲಿ ಕಿತ್ತಳೆ ಬಣ್ಣದ ಮುನ್ನೆಚ್ಚರಿಕೆ ನೀಡಲಾಗಿದೆ.

ರಾಜ್ಯದಾದ್ಯಂತ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ 48 ಗಂಟೆಗಳವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ 21ರಿಂದ 23ರವರೆಗೆ ಬಹುತೇಕ ಎಲ್ಲ ಜಿಲ್ಲೆಗಳ ಆಯ್ದ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಾಗೂ ಬೆಳಗಾವಿಯಲ್ಲಿ 24 ಮತ್ತು 25ರಂದು ಅತಿ ಭಾರೀ ಮಳೆಯ ನಿರೀಕ್ಷೆ ಇದೆ. ಈ ಜಿಲ್ಲೆಗಳಲ್ಲಿ ಕಿತ್ತಳೆ ಬಣ್ಣದ ಮುನ್ನೆಚ್ಚರಿಕೆ ನೀಡಲಾಗಿದೆ. ಒಂದೇ ದಿನದಲ್ಲಿ 115.6ರಿಂದ 204.4 ಮಿ.ಮೀ.ಮಳೆಯಾಗುವ ಸಂಭವ ಇರುವ ಪ್ರದೇಶದಲ್ಲಿ ಈ ಎಚ್ಚರಿಕೆ ನೀಡಲಾಗುತ್ತದೆ.

ಹಿಂಗಾರು ಮಾರುತಗಳ ಭರ್ಜರಿ ಪ್ರವೇಶದಿಂದ ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಮಳೆ ಅಬ್ಬರಿಸುತ್ತಿದೆ. ಇನ್ನೂ 3-4 ದಿನಗಳು ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಾತ್ರವಲ್ಲ, ಮುಂದಿನ ಮೂರು ದಿನಗಳು ಮಳೆ ಅಬ್ಬರ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ಕಚೇರಿ ತಿಳಿಸಿದೆ.

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

5 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

20 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

35 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago