ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂಬುದನ್ನು ಜನತೆ ಸಾಬೀತು ಮಾಡಿದ್ದಾರೆ
ಉಡುಪಿ: ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂಬುದನ್ನು ಜನತೆ ಸಾಬೀತು ಮಾಡಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಂತೋಷ ವ್ಯಕ್ತಪಡಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಯವರನ್ನು 2,58,903 ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಕ್ಷೇತ್ರದ ಜನತೆ ಕಾಂಗ್ರೆಸ್ ಸರಕಾರದ ಅವೈಜ್ಞಾನಿಕ ಗ್ಯಾರಂಟಿ ಭಾಗ್ಯಗಳನ್ನು ವಿರೋಧಿಸಿ, ಹಿಂದೂ ವಿರೋಧಿ ನೀತಿಗೆ ದಿಟ್ಟ ಉತ್ತರ ನೀಡಿ ಸಿದ್ಧರಾಮಯ್ಯ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 45,000 ಅಂತರದ ಮುನ್ನಡೆ ನೀಡಿದ್ದು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹತ್ತು ವರ್ಷಗಳ ಸಾಧನೆಗೆ ಜನ ಮನ್ನಣೆ ನೀಡಿದ್ದಾರೆ . ಮುಂದಿನ ದಿನಗಳಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೋಟ ಶ್ರೀನಿವಾಸ ಪೂಜಾರಿ ಯವರು ಸಮರ್ಥ ಸಂಸದರಾಗಿ ಕಾರ್ಯನಿರ್ವಹಿ ಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…
ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು ಕೊಟ್ಟಿಗೆಹಾರ: ವಿಲ್ಪುರಂ - ಮಂಗಳೂರು…
ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು…
ಉಡುಪಿ: ಡೇವಿಡ್ ಡಿಸೋಜ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ; ಶೂಟರ್ ಕಾಲಿಗೆ ಗುಂಡೇಟು…