Featured

ಕರಾವಳಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣ ರದ್ದುಗೊಳಿಸಲು ಗೃಹ ಸಚಿವರಿಗೆ ಸಚಿವ ಕೋಟ ಮನವಿ -Vishwanews24

ಕರಾವಳಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣ ರದ್ದುಗೊಳಿಸಲು ಗೃಹ ಸಚಿವರಿಗೆ ಸಚಿವ ಕೋಟ ಮನವಿ -Vishwanews24

ಬೆಂಗಳೂರು : ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಾಸ್ ಪಡೆಯಬೇಕೆಂದು ಸಂಘಟನೆಗಳು ಕೊಟ್ಟಿರುವ ಮನವಿಯನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಗೃಹ ಸಚಿವ ಆರಗ ಜ್ನಾನೇಂದ್ರ ಅವರಿಗೆ ಹಸ್ತಾಂತರಿಸಿದ್ದಾರೆ.

ಅನ್ಯ ಸಂಘಟನೆಯ ಕಾರ್ಯಕರ್ತರ ಪ್ರಕರಣಗಳನ್ನು ಹಿಂದಿನ ಸರ್ಕಾರ ವಾಪಾಸ್ ಪಡೆದಿದ್ದು ಅದೇ ಸಂದರ್ಭದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಕೇಸುಗಳು ಬಾಕಿ ಉಳಿದಿದೆ ಎಂದು ಕರಾವಳಿ ಭಾಗದ ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿರುವ ಇಂತಹಾ ಪ್ರಕರಣಗಳನ್ನು ಕೂಡಲೇ ಮಾಹಿತಿ ಪಡೆದುಕೊಂಡು ಭಾರತೀಯ ಜನತಾ ಪಾರ್ಟಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿರುವ ಸುಳ್ಳು ಪ್ರಕರಣಗಳನ್ನು ತಕ್ಷಣ ವಾಪಾಸು ಪಡೆಯಬೇಕೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಉಲ್ಲೇಖಿಸಿದರು.

ಗೃಹ ಸಚಿವ ಆರಗ ಜ್ನಾನೇಂದ್ರರವರು ಈ ವಿಷಯಗಳನ್ನು ಕೂಡಲೇ ಗಮನಿಸಿ ಎಲ್ಲಾ ಜಿಲ್ಲೆಗಳಿಂದ ಮಾಹಿತಿಯನ್ನು ಪಡೆದು ಸಚಿವ ಸಂಪುಟದಲ್ಲಿ ಮಂಡಿಸಿ ಸುಳ್ಳು ಕೇಸುಗಳನ್ನು ವಾಪಾಸು ಪಡೆಯುವ ಭರವಸೆ ನೀಡಿದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago