ಬೆಂಗಳೂರು : ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಾಸ್ ಪಡೆಯಬೇಕೆಂದು ಸಂಘಟನೆಗಳು ಕೊಟ್ಟಿರುವ ಮನವಿಯನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಗೃಹ ಸಚಿವ ಆರಗ ಜ್ನಾನೇಂದ್ರ ಅವರಿಗೆ ಹಸ್ತಾಂತರಿಸಿದ್ದಾರೆ.
ಅನ್ಯ ಸಂಘಟನೆಯ ಕಾರ್ಯಕರ್ತರ ಪ್ರಕರಣಗಳನ್ನು ಹಿಂದಿನ ಸರ್ಕಾರ ವಾಪಾಸ್ ಪಡೆದಿದ್ದು ಅದೇ ಸಂದರ್ಭದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಕೇಸುಗಳು ಬಾಕಿ ಉಳಿದಿದೆ ಎಂದು ಕರಾವಳಿ ಭಾಗದ ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿರುವ ಇಂತಹಾ ಪ್ರಕರಣಗಳನ್ನು ಕೂಡಲೇ ಮಾಹಿತಿ ಪಡೆದುಕೊಂಡು ಭಾರತೀಯ ಜನತಾ ಪಾರ್ಟಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿರುವ ಸುಳ್ಳು ಪ್ರಕರಣಗಳನ್ನು ತಕ್ಷಣ ವಾಪಾಸು ಪಡೆಯಬೇಕೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಉಲ್ಲೇಖಿಸಿದರು.
ಗೃಹ ಸಚಿವ ಆರಗ ಜ್ನಾನೇಂದ್ರರವರು ಈ ವಿಷಯಗಳನ್ನು ಕೂಡಲೇ ಗಮನಿಸಿ ಎಲ್ಲಾ ಜಿಲ್ಲೆಗಳಿಂದ ಮಾಹಿತಿಯನ್ನು ಪಡೆದು ಸಚಿವ ಸಂಪುಟದಲ್ಲಿ ಮಂಡಿಸಿ ಸುಳ್ಳು ಕೇಸುಗಳನ್ನು ವಾಪಾಸು ಪಡೆಯುವ ಭರವಸೆ ನೀಡಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…