ಉಡುಪಿ: ಕರಾವಳಿ ಹೊರತುಪಡಿಸಿ ಅನ್ಯ ಜಿಲ್ಲೆಗಳಲ್ಲೂ ಕಂಬಳ ಆಯೋಜಿಸಬಹುದು ಎಂದು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ಬೆಂಗಳೂರಿನಲ್ಲಿ ಕಂಬಳ ನಡೆದಾಗ ಪ್ರಾಣಿಗಳಿಗೆ ಹಿಂಸೆಯಾಗುತ್ತೆ, ಬೇರೆ ಜಿಲ್ಲೆಗಳಲ್ಲಿ ಕಂಬಳ ನಡೆಯಬಾರದು ಎಂದು ಪೇಟಾದವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಅವಕಾಶ ನೀಡಿರುವುದು ಕಂಬಳ ಪ್ರೇಮಿಗಳಲ್ಲಿ ಹರ್ಷ ಉಂಟುಮಾಡಿದೆ.
ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಬೆಳಪು ದೇವಿ ಪ್ರಸಾದ ಶೆಟ್ಟಿ ಅವರು, ಹೈಕೋರ್ಟ್ ಆದೇಶ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಹರ್ಷ ತಂದಿದೆ. ಇದು ರಾಜ್ಯ ಸರ್ಕಾರದಿಂದ ಸಿಕ್ಕ ಮಾನ್ಯತೆ. ಹೈಕೋರ್ಟ್ ಆದೇಶ ರಾಜ್ಯ ಸರ್ಕಾರದ ನಡೆಗೆ ಪೂರಕವಾಗಿದೆ ಎಂದರು.
ಒಂದೂವರೆ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಕಂಬಳ ಮಾಡಿದೆವು. ಇದರಿಂದ ಅಂತರಾಷ್ಟ್ರೀಯ ಮಟ್ಟದ ಮನ್ನಣೆ ಸಿಕ್ಕಿತು. ಹೀಗಾಗಿ ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿದ್ಧತೆ ಮಾಡಿದ್ದೇವು. ಅಲ್ಲದೆ, ಶಿವಮೊಗ್ಗದಲ್ಲೂ ಕಂಬಳ ಮಾಡಲು ಬೇಡಿಕೆ ಬಂದಿತ್ತು. ಆದರೆ ಪೇಟಾದವರು ಇದನ್ನು ವಿರೋಧಿಸಿದ್ದರು. ಅವಿಭಜಿತ ಜಿಲ್ಲೆ ಹೊರತುಪಡಿಸಿ ಕಂಬಳ ಮಾಡಬಾರದು ಎಂದು ಪೇಟಾ ಹೇಳಿತ್ತು. ಕೋಣಗಳಿಗೆ ಹಿಂಸೆ ಆಗುತ್ತದೆ ಎಂದು ವಾದ ಮಾಡಿದ್ದರು. ಇದೀಗ ಸರಕಾರ ಕಂಬಳಕ್ಕೆ ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ಅವಕಾಶ ನೀಡಿದೆ. ಆದ್ದರಿಂದ ಕಂಬಳ ರಾಜ್ಯದ ಯಾವ ಭಾಗದಲ್ಲೂ ಮಾಡಬಹುದು ಎಂದು ಕೋರ್ಟ್ ಹೇಳಿದೆ. ನಿಯಮಗಳನ್ನು ಪಾಲಿಸಬೇಕು ಎಂದು ನಿರ್ದೇಶನ ನೀಡಿದೆ. ಕೋಣಗಳ ಆರೋಗ್ಯ ಮತ್ತು ಶಿಸ್ತು ಪಾಲಿಸಬೇಕು ಎಂದು ನಿರ್ದೇಶನ ನೀಡಿದೆ ಎಂದು ಹೇಳಿದರು.
ಕರಾವಳಿಯಲ್ಲಿ 25 ಕಡೆ ಜೋಡುಕರೆ ಕಂಬಳ ನಡೆಯುತ್ತಿದೆ. 360ಕ್ಕೂ ಹೆಚ್ಚು ಜೋಡು ಕೋಣಗಳು ಭಾಗವಹಿಸುತ್ತವೆ. ಕುಂದಾಪುರದಲ್ಲಿ ಸಾಂಪ್ರದಾಯಿಕ ರೀತಿಯ 300 ಕಂಬಳ ನಡೆಯುತ್ತೆ. ಬೆಂಗಳೂರು ಹಾಸನ ಮೈಸೂರು ಶಿವಮೊಗ್ಗ ,ಮುಂಬೈ ನಲ್ಲೂ ಬೇಡಿಕೆ ಇದೆ. ಪೇಟಾ ದವರು ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದಾರೆ. ಕುದುರೆ ರೇಸಿಗೆ ಹೋಗಿ ಕೂತು ನೋಡಿ ಬರುತ್ತಾರೆ. ಕಂಬಳ ಒಳ್ಳೆಯ ಕ್ರೀಡೆ. ರೈತಾಪಿ ಜನರ ಜೀವನಾಡಿ ಕ್ರೀಡೆ ಕಂಬಳ. ಕೋಣಗಳನ್ನು ಬಹಳ ಪ್ರೀತಿಯಿಂದ ಸಾಕುತ್ತಾರೆ. ಲಕ್ಷಾಂತರ ವೆಚ್ಚ ಮಾಡಿ ಕಂಬಳ ಮಾಡುತ್ತೇವೆ. ಮೋಜು ಮಸ್ತಿಗಲ್ಲ ಸಂಪ್ರದಾಯ ಉಳಿಸುವ ಕ್ರೀಡೆ. ಪೇಟಾದವರು ಅನಗತ್ಯ ಕಿರುಕುಳ ನೀಡುತ್ತಾರೆ. ಪೇಟಾದವರು ಕಂಬಳ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೋದರು. ಆದರೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಬರುವ ಮೂಲಕ ಕಂಬಳಕ್ಕೆ ಅವಕಾಶ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…
ಪುತ್ತೂರು: ಕೋಮು ಪ್ರಚೋದನೆ ಆರೋಪ ; 7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…