Featured

ಕರಾವಳಿ ಹೊರತುಪಡಿಸಿ ಅನ್ಯ ಜಿಲ್ಲೆಗಳಲ್ಲೂ ಕಂಬಳ ನಡೆಸಲು ಹೈಕೋರ್ಟ್ ಹಸಿರು ನಿಶಾನೆ : ಕಂಬಳ ಪ್ರೇಮಿಗಳಲ್ಲಿ ಹರ್ಷ – vishwanews24

ಕಂಬಳ ಕ್ರೀಡೆಗೆ ಹೈಕೋರ್ಟ್ ಆದೇಶ ರಾಜ್ಯ ಸರ್ಕಾರದ ನಡೆಗೆ ಪೂರಕ : ಬೆಳಪು ದೇವಿ ಪ್ರಸಾದ್ ಶೆಟ್ಟಿ

ಉಡುಪಿ: ಕರಾವಳಿ ಹೊರತುಪಡಿಸಿ ಅನ್ಯ ಜಿಲ್ಲೆಗಳಲ್ಲೂ ಕಂಬಳ ಆಯೋಜಿಸಬಹುದು ಎಂದು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ಬೆಂಗಳೂರಿನಲ್ಲಿ ಕಂಬಳ ನಡೆದಾಗ ಪ್ರಾಣಿಗಳಿಗೆ ಹಿಂಸೆಯಾಗುತ್ತೆ, ಬೇರೆ ಜಿಲ್ಲೆಗಳಲ್ಲಿ ಕಂಬಳ ನಡೆಯಬಾರದು ಎಂದು ಪೇಟಾದವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಅವಕಾಶ ನೀಡಿರುವುದು ಕಂಬಳ ಪ್ರೇಮಿಗಳಲ್ಲಿ ಹರ್ಷ ಉಂಟುಮಾಡಿದೆ.

ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಬೆಳಪು ದೇವಿ ಪ್ರಸಾದ ಶೆಟ್ಟಿ ಅವರು, ಹೈಕೋರ್ಟ್ ಆದೇಶ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಹರ್ಷ ತಂದಿದೆ. ಇದು ರಾಜ್ಯ ಸರ್ಕಾರದಿಂದ ಸಿಕ್ಕ ಮಾನ್ಯತೆ. ಹೈಕೋರ್ಟ್ ಆದೇಶ ರಾಜ್ಯ ಸರ್ಕಾರದ ನಡೆಗೆ ಪೂರಕವಾಗಿದೆ ಎಂದರು.

ಒಂದೂವರೆ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಕಂಬಳ ಮಾಡಿದೆವು‌. ಇದರಿಂದ ಅಂತರಾಷ್ಟ್ರೀಯ ಮಟ್ಟದ ಮನ್ನಣೆ ಸಿಕ್ಕಿತು. ಹೀಗಾಗಿ ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿದ್ಧತೆ ಮಾಡಿದ್ದೇವು. ಅಲ್ಲದೆ, ಶಿವಮೊಗ್ಗದಲ್ಲೂ ಕಂಬಳ ಮಾಡಲು ಬೇಡಿಕೆ ಬಂದಿತ್ತು. ಆದರೆ ಪೇಟಾದವರು ಇದನ್ನು ವಿರೋಧಿಸಿದ್ದರು‌‌. ಅವಿಭಜಿತ ಜಿಲ್ಲೆ ಹೊರತುಪಡಿಸಿ ಕಂಬಳ ಮಾಡಬಾರದು ಎಂದು ಪೇಟಾ ಹೇಳಿತ್ತು. ಕೋಣಗಳಿಗೆ ಹಿಂಸೆ ಆಗುತ್ತದೆ ಎಂದು ವಾದ ಮಾಡಿದ್ದರು. ಇದೀಗ ಸರಕಾರ ಕಂಬಳಕ್ಕೆ ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ಅವಕಾಶ ನೀಡಿದೆ‌. ಆದ್ದರಿಂದ ಕಂಬಳ ರಾಜ್ಯದ ಯಾವ ಭಾಗದಲ್ಲೂ ಮಾಡಬಹುದು ಎಂದು ಕೋರ್ಟ್ ಹೇಳಿದೆ. ನಿಯಮಗಳನ್ನು ಪಾಲಿಸಬೇಕು ಎಂದು ನಿರ್ದೇಶನ ನೀಡಿದೆ‌. ಕೋಣಗಳ ಆರೋಗ್ಯ ಮತ್ತು ಶಿಸ್ತು ಪಾಲಿಸಬೇಕು ಎಂದು ನಿರ್ದೇಶನ ನೀಡಿದೆ ಎಂದು ಹೇಳಿದರು‌.

ಕರಾವಳಿಯಲ್ಲಿ 25 ಕಡೆ ಜೋಡುಕರೆ ಕಂಬಳ ನಡೆಯುತ್ತಿದೆ. 360ಕ್ಕೂ ಹೆಚ್ಚು ಜೋಡು ಕೋಣಗಳು ಭಾಗವಹಿಸುತ್ತವೆ‌. ಕುಂದಾಪುರದಲ್ಲಿ ಸಾಂಪ್ರದಾಯಿಕ ರೀತಿಯ 300 ಕಂಬಳ ನಡೆಯುತ್ತೆ‌. ಬೆಂಗಳೂರು ಹಾಸನ ಮೈಸೂರು ಶಿವಮೊಗ್ಗ ,ಮುಂಬೈ ನಲ್ಲೂ ಬೇಡಿಕೆ ಇದೆ. ಪೇಟಾ ದವರು ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದಾರೆ‌. ಕುದುರೆ ರೇಸಿಗೆ ಹೋಗಿ ಕೂತು ನೋಡಿ ಬರುತ್ತಾರೆ‌. ಕಂಬಳ ಒಳ್ಳೆಯ ಕ್ರೀಡೆ‌. ರೈತಾಪಿ ಜನರ ಜೀವನಾಡಿ ಕ್ರೀಡೆ ಕಂಬಳ‌. ಕೋಣಗಳನ್ನು ಬಹಳ ಪ್ರೀತಿಯಿಂದ ಸಾಕುತ್ತಾರೆ. ಲಕ್ಷಾಂತರ ವೆಚ್ಚ ಮಾಡಿ ಕಂಬಳ ಮಾಡುತ್ತೇವೆ‌. ಮೋಜು ಮಸ್ತಿಗಲ್ಲ ಸಂಪ್ರದಾಯ ಉಳಿಸುವ ಕ್ರೀಡೆ‌. ಪೇಟಾದವರು ಅನಗತ್ಯ ಕಿರುಕುಳ ನೀಡುತ್ತಾರೆ‌. ಪೇಟಾದವರು ಕಂಬಳ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೋದರು. ಆದರೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಬರುವ ಮೂಲಕ ಕಂಬಳಕ್ಕೆ ಅವಕಾಶ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

9 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

9 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

10 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

10 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

10 hours ago