ಉಡುಪಿ: ಕರಾವಳಿ ಹೊರತುಪಡಿಸಿ ಅನ್ಯ ಜಿಲ್ಲೆಗಳಲ್ಲೂ ಕಂಬಳ ಆಯೋಜಿಸಬಹುದು ಎಂದು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ಬೆಂಗಳೂರಿನಲ್ಲಿ ಕಂಬಳ ನಡೆದಾಗ ಪ್ರಾಣಿಗಳಿಗೆ ಹಿಂಸೆಯಾಗುತ್ತೆ, ಬೇರೆ ಜಿಲ್ಲೆಗಳಲ್ಲಿ ಕಂಬಳ ನಡೆಯಬಾರದು ಎಂದು ಪೇಟಾದವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಅವಕಾಶ ನೀಡಿರುವುದು ಕಂಬಳ ಪ್ರೇಮಿಗಳಲ್ಲಿ ಹರ್ಷ ಉಂಟುಮಾಡಿದೆ.
ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಬೆಳಪು ದೇವಿ ಪ್ರಸಾದ ಶೆಟ್ಟಿ ಅವರು, ಹೈಕೋರ್ಟ್ ಆದೇಶ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಹರ್ಷ ತಂದಿದೆ. ಇದು ರಾಜ್ಯ ಸರ್ಕಾರದಿಂದ ಸಿಕ್ಕ ಮಾನ್ಯತೆ. ಹೈಕೋರ್ಟ್ ಆದೇಶ ರಾಜ್ಯ ಸರ್ಕಾರದ ನಡೆಗೆ ಪೂರಕವಾಗಿದೆ ಎಂದರು.
ಒಂದೂವರೆ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಕಂಬಳ ಮಾಡಿದೆವು. ಇದರಿಂದ ಅಂತರಾಷ್ಟ್ರೀಯ ಮಟ್ಟದ ಮನ್ನಣೆ ಸಿಕ್ಕಿತು. ಹೀಗಾಗಿ ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿದ್ಧತೆ ಮಾಡಿದ್ದೇವು. ಅಲ್ಲದೆ, ಶಿವಮೊಗ್ಗದಲ್ಲೂ ಕಂಬಳ ಮಾಡಲು ಬೇಡಿಕೆ ಬಂದಿತ್ತು. ಆದರೆ ಪೇಟಾದವರು ಇದನ್ನು ವಿರೋಧಿಸಿದ್ದರು. ಅವಿಭಜಿತ ಜಿಲ್ಲೆ ಹೊರತುಪಡಿಸಿ ಕಂಬಳ ಮಾಡಬಾರದು ಎಂದು ಪೇಟಾ ಹೇಳಿತ್ತು. ಕೋಣಗಳಿಗೆ ಹಿಂಸೆ ಆಗುತ್ತದೆ ಎಂದು ವಾದ ಮಾಡಿದ್ದರು. ಇದೀಗ ಸರಕಾರ ಕಂಬಳಕ್ಕೆ ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ಅವಕಾಶ ನೀಡಿದೆ. ಆದ್ದರಿಂದ ಕಂಬಳ ರಾಜ್ಯದ ಯಾವ ಭಾಗದಲ್ಲೂ ಮಾಡಬಹುದು ಎಂದು ಕೋರ್ಟ್ ಹೇಳಿದೆ. ನಿಯಮಗಳನ್ನು ಪಾಲಿಸಬೇಕು ಎಂದು ನಿರ್ದೇಶನ ನೀಡಿದೆ. ಕೋಣಗಳ ಆರೋಗ್ಯ ಮತ್ತು ಶಿಸ್ತು ಪಾಲಿಸಬೇಕು ಎಂದು ನಿರ್ದೇಶನ ನೀಡಿದೆ ಎಂದು ಹೇಳಿದರು.
ಕರಾವಳಿಯಲ್ಲಿ 25 ಕಡೆ ಜೋಡುಕರೆ ಕಂಬಳ ನಡೆಯುತ್ತಿದೆ. 360ಕ್ಕೂ ಹೆಚ್ಚು ಜೋಡು ಕೋಣಗಳು ಭಾಗವಹಿಸುತ್ತವೆ. ಕುಂದಾಪುರದಲ್ಲಿ ಸಾಂಪ್ರದಾಯಿಕ ರೀತಿಯ 300 ಕಂಬಳ ನಡೆಯುತ್ತೆ. ಬೆಂಗಳೂರು ಹಾಸನ ಮೈಸೂರು ಶಿವಮೊಗ್ಗ ,ಮುಂಬೈ ನಲ್ಲೂ ಬೇಡಿಕೆ ಇದೆ. ಪೇಟಾ ದವರು ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದಾರೆ. ಕುದುರೆ ರೇಸಿಗೆ ಹೋಗಿ ಕೂತು ನೋಡಿ ಬರುತ್ತಾರೆ. ಕಂಬಳ ಒಳ್ಳೆಯ ಕ್ರೀಡೆ. ರೈತಾಪಿ ಜನರ ಜೀವನಾಡಿ ಕ್ರೀಡೆ ಕಂಬಳ. ಕೋಣಗಳನ್ನು ಬಹಳ ಪ್ರೀತಿಯಿಂದ ಸಾಕುತ್ತಾರೆ. ಲಕ್ಷಾಂತರ ವೆಚ್ಚ ಮಾಡಿ ಕಂಬಳ ಮಾಡುತ್ತೇವೆ. ಮೋಜು ಮಸ್ತಿಗಲ್ಲ ಸಂಪ್ರದಾಯ ಉಳಿಸುವ ಕ್ರೀಡೆ. ಪೇಟಾದವರು ಅನಗತ್ಯ ಕಿರುಕುಳ ನೀಡುತ್ತಾರೆ. ಪೇಟಾದವರು ಕಂಬಳ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೋದರು. ಆದರೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಬರುವ ಮೂಲಕ ಕಂಬಳಕ್ಕೆ ಅವಕಾಶ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…