ರಾಜ್ಯ ನ್ಯೂಸ್

ಕರುಣಾನಿಧಿ ನಿಧನ: ಕರ್ನಾಟಕ-ತಮಿಳುನಾಡು ಬಸ್ ಸಂಚಾರ ಬಂದ್.

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ವಿಧಿವಶರಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಅಧಿಕಾರಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್’ಟಿಸಿ) ಮತ್ತು ತಮಿಳುನಾಡು ರಾಜ್ಯ ಸಾರಿಗೆ ನಿಗಮಗಳ ಬಸ್’ಗಳ ಕಾರ್ಯಾಚರಣೆ ಮಂಗಳವಾ ಸಂಜೆಯಿಂದಲೇ ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ.
ಎರಡೂ ರಾಜ್ಯಗಳ ನಡುವೆ ಸಾರಿಗೆ ಬಸ್ ಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತಾಗಿದೆ.
ನಗರದ ಶಾಂತಿನಗರ ಮತ್ತು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಸಂಜೆ ತಮಿಳುನಾಡಿಗೆ ತೆರಳಲು ಬಂದಿದ್ದ ಪ್ರಯಾಣಿಕರು ಬಸ್ ಸಿಗದೆ ಪರದಾಡುವಂತಾಗಿತ್ತು. ಕೋರಮಂಗಲ, ಸಿಲ್ಕ್’ಬೋರ್ಡ್, ಹೆಬ್ಬಗೋಡಿ, ಆನೇಕಲ್ ಗಡಿಯಲ್ಲಿ ಬಸ್ ಗಾಗಿ ಕಾಯುತ್ತಿದ್ದ ಪ್ರಯಾಣಿಕರು ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡ ವಿಚಾರ ತಿಳಿದು ನಿರಾಸೆಗೊಂಡರು.
ಕೆಎಸ್ಆರ್’ಟಿಸಿ ನಿಗಮದ ವ್ಯಾಪ್ತಿಯ ವಿಭಾಗಗಳಿಂದ ನಿತ್ಯ ತಮಿಳುನಾಡು ರಾಜ್ಯಕ್ಕೆ 432 ಬಸ್ ಗಳು ಸಂಚರಿಸುತ್ತವೆ. ಈ ಪೈಕಿ ಚೆನ್ನೈಗೆ 87 ಬಸ್’ಗಳು ಸಂಚರಿಸುತ್ತವೆ. ಇದರಿಂದ ನಿಗಮಕ್ಕೆ ನಿತ್ಯ ರೂ.61.71ಲಕ್ಷ ಆದಾಯ ಬರುತ್ತಿದೆ.
ಕರುಣಾನಿಧಿ ನಿಧನದ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಕರ್ನಾಟಕದ ಬಸ್ ಗಳಿಂದ ತೊಂದರೆಯಾಗಬಹುದು ಎಂಬ ನಿರೀಕ್ಷೆಯಿಂದ ಸಂಜೆ 6.30ಕ್ಕೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

16 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

16 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

16 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

16 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

17 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

17 hours ago