ಬೆಂಗಳೂರು : ‘ಜೀವನದಲ್ಲಿ ಕಷ್ಟಪಡದೇ ಯಾವ ಕಾರ್ಯಸಾಧನೆಯೂ ಆಗುವುದಿಲ್ಲ. ಇದಕ್ಕಾಗಿ ಎಲ್ಲರೂ ಶ್ರಮ ಪಡಬೇಕು. ತನ್ಮೂಲಕ ಸಾರ್ಥಕತೆ ಪಡೆಯಬೇಕು’ ಎಂದು ಎಂದು ಗೃಹ ಇಲಾಖೆ ಕಾರ್ಯದರ್ಶಿ ಡಿ.ರೂಪಾ ಅಭಿಪ್ರಾಯಪಟ್ಟರು.
ಸೋಮವಾರ ಸಾಗರೋತ್ತರ ಕನ್ನಡಿಗರು ಸಂಘಟನೆ ಸೋಮವಾರ ಆಯೋಜಿಸಿದ ಸಾಗರೋತ್ತರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡಿ. ರೂಪಾ ಅವರು, ‘ನನ್ನ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದ್ದೇನೆ. ಸರ್ಕಾರ ನನಗೆ ವಹಿಸಿದ ಕಾರ್ಯವನ್ನು ಅಚ್ಚುಕಟ್ಟಾಗಿ ಯಾವುದೇ ಆಮಿಷಕ್ಕೆ ಒಳಗಾಗದೆ ಜವಾಬ್ದಾರಿ ಕೆಲಸವನ್ನು ನಿರ್ವಹಿಸಿದ್ದೇನೆ’ ಎಂದು ಹೇಳಿದರು.
‘ಕರ್ನಾಟಕದಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದು ನನ್ನ ಪುಣ್ಯ, ನೊಂದಿರುವ ಎಷ್ಟೋ ಜನ ನನ್ನ ಹತ್ತಿರ ಬಂದು ತಮ್ಮ ಕಷ್ಟಹೇಳಿದಾಗ ಸಹಕಾರ ಮಾಡಿದ್ದೇನೆ. ಕರುನಾಡಿನಲ್ಲಿ ಸೇವೆ ಸಲ್ಲಿಸಲು ದೊರೆತ ಅವಕಾಶವನ್ನು ನನ್ನ ಭಾಗ್ಯ ಎಂದೇ ಭಾವಿಸಿದ್ದೇನೆ’ ಎಂದರು.
‘ಇನ್ನು ಸಾಗರೋತ್ತರ ಕನ್ನಡಿಗರು ವಿಶ್ವದ ಎಲ್ಲಾ ದೇಶಗಳ ಕನ್ನಡಿಗರನ್ನು ಒಗ್ಗೂಡಿಸಿ ಇಂತಹ ವಿನೂತನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಹೆಮ್ಮೆಯಿದೆ’ ಎಂದು ಹೇಳಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…