2022ರ ಕರುನಾಡ ಸಂಭ್ರಮಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ. ಡಿಸೆಂಬರ್ 10.11 ರಂದು ನಡೆದ 12ನೇ ವರ್ಷದ ಕರುನಾಡ ಸಂಭ್ರಮ ಚಂದನವನದ ಸ್ಟಾರ್ ತಾರೆಗಳ ಸಮಾಗಮ, ಹಾಡು, ಡಾನ್ಸ್ ಗಳಿಂದ ಕಳೆಗಟ್ಟಿತ್ತು. ಎರಡು ದಿನ ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ವತಿಯಿಂದ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿಯನ್ನು ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ನೀಡಿ ಗೌರವಿಸಿದೆ. ಸಹೋದರ ಹಾಗೂ ನಟ ಧ್ರುವ ಸರ್ಜಾ ಪ್ರಶಸ್ತಿಯನ್ನು ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ರು. ಈ ವೇಳೆ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಅಧ್ಯಕ್ಷ ಕೃಷ್ಣೇಗೌಡ್ರು, ಪ್ರದೀಪ್, ಪ್ರಶಾಂತ್ ಮತ್ತು ತಂಡ ಹಾಜರಿದರು. ವರುಣ್ ಸ್ಟುಡಿಯೋಸ್ ಮತ್ತು ರಾಜ್ ಇವೆಂಟ್ಸ್ ಸಹಯೋಗದಲ್ಲಿ ನಡೆದ ಕರುನಾಡ ಸಂಭ್ರಮ ಯಶಸ್ವಿಯಾಗಿ ತೆರೆ ಕಂಡಿದೆ.
ಕಾರ್ಯಕ್ರಮ ಪ್ರತಿ ವರ್ಷದಂತೆ ಈ ಬಾರಿಯೂ ಕಲರ್ ಫುಲ್ ಆಗಿತ್ತು. ಚಂದನವನದ ಖ್ಯಾತ ತಾರೆಯರು ಭಾಗಿಯಾಗಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಗಿಲ್ಲಕ್ಕೋ ಶಿವ ಗಿಲ್ಲಕ್ಕೋ’ ಹಾಡಿಗೆ ಹೆಜ್ಜೆ ಹಾಕಿ ಕಾರ್ಯಕ್ರಮದ ಎನರ್ಜಿ ಹೆಚ್ಚಿಸಿದ್ರೆ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಕಾವ್ಯಾ ಶಾ, ವಿಕ್ರಮ್ ರವಿಚಂದ್ರನ್, ನಿಧಿ ಸುಬ್ಬಯ್ಯ, ಸಂಗೀತಾ ಶೃಂಗೇರಿ, ವಿರಾಟ್ ಸೇರಿದಂತೆ ಹಲವು ತಾರೆಯರು ತಮ್ಮ ಡಾನ್ಸ್ ಮೂಲಕ ನೆರೆದಿದ್ದವರನ್ನು ರಂಜಿಸಿದರು. ಎಸ್. ಪಿ. ಬಿ ಚರಣ್, ಸಿಂಗರ್ ಮನು, ನವೀನ್ ಸಜ್ಜು, ಅನುರಾಧ ಭಟ್, ವಿಜಯ್ ಪ್ರಕಾಶ್ ತಮ್ಮ ಗಾಯನದ ಮೂಲಕ ಕಾರ್ಯಕ್ರಮದ ರಂಗು ಹೆಚ್ಚಿಸಿದ್ರು. ಮಾನ್ವಿತ ಹರೀಶ್, ಸೃಜನ್ ಲೊಕೇಶ್, ಶ್ರೀನಗರ ಕಿಟ್ಟಿ, ರವಿಶಂಕರ್ ಗೌಡ, ರವಿಶಂಕರ್ ಸೇರಿದಂತೆ ಹಲವು ತಾರೆಯರು ಕಲರ್ ಫುಲ್ ಕರುನಾಡ ಸಂಭ್ರಮ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…