ಬೀದರ್ : ಕರ್ತವ್ಯದ ವೇಳೆಯೇ ಪೊಲೀಸ್ ಪೇದೆಗೆ ಹೃದಯಾಘಾತ ಸಂಭವಿಸಿದ್ದು, ಕೆಲವೇ ಕ್ಷಣಗಳಲ್ಲಿ ಪೊಲೀಸ್ ಸಾವಿಗೀಡಾಗಿರುವ ಘಟನೆ ಬೀದರ್ನ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ರಾಯಚೂರು ಮೂಲದ ಯುವಕ ಕಳೆದ 5 ವರ್ಷದ ಹಿಂದೆ ಪೊಲೀಸ್ ಪೆದೆಯಾಗಿ ಬೀದರ್ಗೆ ನೇಮಕಗೊಂಡಿದ್ದಾನೆ. ತಂದೆ, ತಾಯಿ ಕುಟುಂಬವನ್ನೆಲ್ಲಾ ಬಿಟ್ಟು ಬೀದರ್ನ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದನು. ಆದರೆ, ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೊಲೀಸ್ ಆನ್ ಡ್ಯೂಟಿಯಲ್ಲಿದ್ದಾಗಲೇ ಹಾರ್ಟ್ ಅಟ್ಯಾಕ್ಗೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಪೊಲೀಸ್ ಪೇದೆ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಪೊಲೀಸ್ ಪೇದೆ ಚಂದ್ರಶೇಖರ್ (28) ಆಗಿದ್ದಾರೆ. ಇವರು ರಾಯಚೂರು ತಾಲೂಕಿನ ತಲಮಾರಿ ಗ್ರಾಮದವರಾಗಿದ್ದರು. 2018ರ ಬ್ಯಾಚ್ನಲ್ಲಿ ಪೊಲೀಸ್ ಇಲಾಖೆಗೆ ನೇಮಕವಾಗಿದ್ದರು. ಕಳೆದ 5 ವರ್ಷಗಳಿಂದ ನಾಗರಿಕ ಪೊಲೀಸ್ ಪೇದೆಯಾಗಿ ಬೀದರ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…