Featured

ಕರ್ತವ್ಯನಿರತ ಪೊಲೀಸರಿಗೆ ಬಾಡಿವೋರ್ನ್ ಕ್ಯಾಮೆರಾ ಅಳವಡಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ ಹೈಕೋರ್ಟ್ – Vishwanews24

ಕರ್ತವ್ಯನಿರತ ಪೊಲೀಸರಿಗೆ ಬಾಡಿವೋರ್ನ್ ಕ್ಯಾಮೆರಾ ಅಳವಡಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ ಹೈಕೋರ್ಟ್ – Vishwanews24

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್‌ಗೆ ಕರ್ತವ್ಯದ ವೇಳೆ ಬಾಡಿವೋರ್ನ್ ಕ್ಯಾಮೆರಾಗಳನ್ನು ಅಳವಡಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಪೊಲೀಸ್ ಸಿಬ್ಬಂದಿಗೆ ಬಾಡಿವೋರ್ನ್ ಕ್ಯಾಮೆರಾ ಅಳವಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ವಕೀಲೆ ಗೀತಾಮಿಶ್ರಾ ಸಾರ್ವಜನಿಕ ಹಿತಾಸಕ್ತಿಗಾಗಿ ಅರ್ಜಿ ಹಾಕಿದ್ದರು.

ಭ್ರಷ್ಟಾಚಾರ ನಿಯಂತ್ರಣ ಹಾಗೂ ಮೇಲ್ವಿಚಾರಣೆಯ ಮುಖ್ಯ ಉದ್ದೇಶವನ್ನಿಟ್ಟುಕೊಂಡು ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಟ್ರಾಫಿಕ್ ಪೊಲೀಸರು ಬಾಡಿ ಕ್ಯಾಮರಾ ಧರಿಸುವುದರಿಂದ ಸಿಬ್ಬಂದಿಯ ಭ್ರಷ್ಟಾಚಾರ ನಿಯಂತ್ರಿಸಬಹುದು. ಹಿರಿಯ ಅಧಿಕಾರಿಗಳು ತಮ್ಮ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಯನ್ನು ಠಾಣೆಯಿಂದಲೇ ಮೇಲ್ವಿಚಾರಣೆ ಮಾಡಬಹುದು.

ಬಾಡಿ ಕ್ಯಾಮರಾ ಅಳವಡಿಸಿಕೊಂಡರೆ ತಪ್ಪಿತಸ್ಥರೇ ತಿರುಗಿ ಬಿದ್ದಂತಹ ಸಂದರ್ಭಗಳಲ್ಲಿ ಪೊಲೀಸರಿಗೂ ರಕ್ಷಣೆ ಸಿಗಲಿದೆ.
ಆದ್ದರಿಂದ ಬೆಂಗಳೂರು ನಗರ ಪೊಲೀಸರಿಗಾಗಿ ಖರೀದಿಸಿರುವ 50 ಬಾಡಿ ಕ್ಯಾಮರಾ ಬಳಸುವಂತೆ ನಿರ್ದೇಶಿಸಬೇಕು.

ಅಲ್ಲದೆ ರಾಜ್ಯಾದ್ಯಂತ ಪೊಲೀಸರು ನಡೆಸುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅನುಕೂಲವಾಗುವಂತೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಾಡಿ ಕ್ಯಾಮರಾ ಖರೀದಿಸಲು ಮತ್ತು ಪೊಲೀಸರಿಗೆ ಅಳವಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮನವಿಯನ್ನು ಸಲ್ಲಿಸಿದ್ದರು.

ಈ ಹಿನ್ನೆಲೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿದ್ದ ವಿಭಾಗೀಯ ಪೀಠಕ್ಕೆ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಕಾರ್ಯಾದೇಶದ ಪ್ರತಿ ಸಲ್ಲಿಸಿದ್ದಾರೆ. ಪೊಲೀಸರಿಗೆ ಅಳವಡಿಸಲು ಒಟ್ಟು 2,860 ಬಾಡಿವೋರ್ನ್ ಕ್ಯಾಮೆರಾ ಖರೀದಿಗಾಗಿ ಕಾರ್ಯಾದೇಶ ಹೊರಡಿಸಲಾಗಿದೆ.

ಈಗಾಗಲೇ 1097 ಕ್ಯಾಮೆರಾಗಳನ್ನು ಒಪ್ಪಂದ ಮಾಡಿಕೊಂಡಿರುವ ಸಂಸ್ಥೆಗಳು ಪೂರೈಸಿವೆ. ಉಳಿದ ಕ್ಯಾಮೆರಾಗಳನ್ನು ಖರೀದಿಸಿ, ಸಿಬ್ಬಂದಿಗೆ ತರಬೇತಿ ನೀಡಿ, ಅಳವಡಿಸಲಾಗುವುದು ಎಂದು ತಿಳಿಸಿದರು.

ಅರ್ಜಿದಾರರ ಪರ ವಕೀಲ ಜಿ.ಆರ್ ಮೋಹನ್ ವಾದಿಸಿ, ಸರ್ಕಾರ ಹಿಂದೆಯೂ 75 ಲಕ್ಷ ರೂ ಖರ್ಚು ಮಾಡಿ 50 ಕ್ಯಾಮೆರಾ ಖರೀದಿಸಿತ್ತು. ಒಂದನ್ನೂ ಬಳಕೆ ಮಾಡಿಲ್ಲ. ಹೀಗಾಗಿಯೇ ಪಿಐಎಲ್ ಸಲ್ಲಿಸಬೇಕಾಯಿತು. ಆದ್ದರಿಂದ ಕ್ಯಾಮೆರಾಗಳನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡುವಂತೆ ನಿರ್ದೇಶಿಸಬೇಕು ಎಂದು ಕೋರಿದರು.

ವಾದ ಆಲಿಸಿದ ಪೀಠ, ಬಾಡಿವೋರ್ನ್ ಕ್ಯಾಮೆರಾಗಳನ್ನು ಖರೀದಿಸಿದ ಬಳಿಕ ಅವುಗಳನ್ನು ಸಮರ್ಪಕವಾಗಿ ಬಳಸಲು ಸರ್ಕಾರ ಪೊಲೀಸರಿಗೆ ಸೂಚಿಸಬೇಕು. ಸ್ಮಾರ್ಟ್ ಟ್ರಾಫಿಕ್ ಪೊಲೀಸ್ ವ್ಯವಸ್ಥೆ ಸುಧಾರಿಸಲು ಕೂಡ ಇಂತಹ ಕ್ಯಾಮೆರಾಗಳನ್ನು ಬಳಕೆ ಮಾಡಬೇಕು ಎಂದು ಆದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago