ಹೊಸದಿಲ್ಲಿ: ಆಕ್ರಮ ಬಾಂಗ್ಲಾದೇಶಿ ವಲಸಿಗರು ಕರ್ನಾಟಕದ ಭದ್ರತೆಗೆ ಸವಾಲಾಗಿದ್ದು,ಕೇಂದ್ರ ಸರ್ಕಾರ ಎನ್ಆರ್ಸಿಯನ್ನು ಕರ್ನಾಟಕಕ್ಕೂ ವಿಸ್ತರಿಸಬೇಕು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂಸತ್ನಲ್ಲಿ ಮನವಿ ಮಾಡಿದ್ದಾರೆ.
ಬುಧವಾರ ಸಂಸತ್ ಕಲಾಪವನ್ನುದ್ದೇಶಿಸಿ ಮಾತನಾಡಿದ ಅವರು , ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್ ಉಗ್ರರು ಬೆಂಗಳೂರಿನಲ್ಲೇ ಅತ್ಯಂತ ಅಪಾಯಕಾರಿ ರಾಕೆಟ್ ಬಾಂಬ್ ಮತ್ತಿತರ ಸ್ಫೋಟಕಗಳನ್ನು ತಯಾರಿಸಿ ದೇಶದ ವಿರುದ್ಧ ಭಯೋತ್ಪಾದನಾ ಕೃತ್ಯಗಳನ್ನು ಎಸಗಲು ಸಂಚು
ರೂಪಿಸಿರುವ ವಿಚಾರವನ್ನು ಪ್ರಸ್ತಾವಿಸಿದರು.
ಎನ್ಆರ್ಸಿಯನ್ನು ಬೆಂಗಳೂರು ಮತ್ತು ಕರ್ನಾಟಕಕ್ಕೂ ವಿಸ್ತರಿಸಿ ಆಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಹೊರ ಹಾಕುವ ಕೆಲಸ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬೆಂಗಳೂರು ಹೊರವಲಯದ ಚಿಕ್ಕಬಾಣಾವರದಲ್ಲಿ ಜೆಎಂಬಿ ಉಗ್ರರು ವಾಸವಿದ್ದ ಹಬೀಬುರ್ ಮನೆಯಲ್ಲಿ ಸ್ಫೋಟಕಸಾಮಗ್ರಿಗಳನ್ನು ಎನ್ಐಎ ತನಿಖಾಧಿಕಾರಿಗಳು ಪತ್ತೆಹಚ್ಚಿದ್ದರು. 9 ಎಂ.ಎಂ ಸ್ಫೋಟಕ, ಸುಧಾರಿತ ಗ್ರೆನೇಡ್ ಶೆಲ್ ದೊರೆತಿತ್ತು. ಆಚ್ಚರಿಯೆಂಬಂತೆ, ಐಇಡಿ/ರಾಕೆಟ್ ತಯಾರಿಸುವ ಇತರ ಸ್ಫೋಟಕ ಸಾಮಗ್ರಿಗಳೂ ದೊರೆತಿದ್ದವು .
ತಾರ್ಕಿಕ ಅಂತ್ಯ ಕಾಣಲಿರುವ ಶಿರ್ವ ಡೇವಿಡ್ ಡಿ'ಸೋಜಾ ಕೊಲೆ ಪ್ರಕರಣ ಹೊರ ರಾಜ್ಯದಲ್ಲಿ ಮಧ್ಯವರ್ತಿಯ ಹುಡುಕಾಟ .. ಪೊಲೀಸರಿಂದ ಆರೋಪಿಗಳ…
ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ:…
ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ…
ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಬಂಟ್ವಾಳ : ನಿಷೇಧಿತ ಎಂಡಿಎಂಎ,…
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…