ಹೊಸದಿಲ್ಲಿ: ಆಕ್ರಮ ಬಾಂಗ್ಲಾದೇಶಿ ವಲಸಿಗರು ಕರ್ನಾಟಕದ ಭದ್ರತೆಗೆ ಸವಾಲಾಗಿದ್ದು,ಕೇಂದ್ರ ಸರ್ಕಾರ ಎನ್ಆರ್ಸಿಯನ್ನು ಕರ್ನಾಟಕಕ್ಕೂ ವಿಸ್ತರಿಸಬೇಕು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂಸತ್ನಲ್ಲಿ ಮನವಿ ಮಾಡಿದ್ದಾರೆ.
ಬುಧವಾರ ಸಂಸತ್ ಕಲಾಪವನ್ನುದ್ದೇಶಿಸಿ ಮಾತನಾಡಿದ ಅವರು , ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್ ಉಗ್ರರು ಬೆಂಗಳೂರಿನಲ್ಲೇ ಅತ್ಯಂತ ಅಪಾಯಕಾರಿ ರಾಕೆಟ್ ಬಾಂಬ್ ಮತ್ತಿತರ ಸ್ಫೋಟಕಗಳನ್ನು ತಯಾರಿಸಿ ದೇಶದ ವಿರುದ್ಧ ಭಯೋತ್ಪಾದನಾ ಕೃತ್ಯಗಳನ್ನು ಎಸಗಲು ಸಂಚು
ರೂಪಿಸಿರುವ ವಿಚಾರವನ್ನು ಪ್ರಸ್ತಾವಿಸಿದರು.
ಎನ್ಆರ್ಸಿಯನ್ನು ಬೆಂಗಳೂರು ಮತ್ತು ಕರ್ನಾಟಕಕ್ಕೂ ವಿಸ್ತರಿಸಿ ಆಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಹೊರ ಹಾಕುವ ಕೆಲಸ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬೆಂಗಳೂರು ಹೊರವಲಯದ ಚಿಕ್ಕಬಾಣಾವರದಲ್ಲಿ ಜೆಎಂಬಿ ಉಗ್ರರು ವಾಸವಿದ್ದ ಹಬೀಬುರ್ ಮನೆಯಲ್ಲಿ ಸ್ಫೋಟಕಸಾಮಗ್ರಿಗಳನ್ನು ಎನ್ಐಎ ತನಿಖಾಧಿಕಾರಿಗಳು ಪತ್ತೆಹಚ್ಚಿದ್ದರು. 9 ಎಂ.ಎಂ ಸ್ಫೋಟಕ, ಸುಧಾರಿತ ಗ್ರೆನೇಡ್ ಶೆಲ್ ದೊರೆತಿತ್ತು. ಆಚ್ಚರಿಯೆಂಬಂತೆ, ಐಇಡಿ/ರಾಕೆಟ್ ತಯಾರಿಸುವ ಇತರ ಸ್ಫೋಟಕ ಸಾಮಗ್ರಿಗಳೂ ದೊರೆತಿದ್ದವು .
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…