ಬೆಂಗಳೂರು: ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಂತೆಯೇ ಆಮ್ ಆದ್ಮಿ ಪಾರ್ಟಿ ಸಿದ್ಧಗೊಂಡಿದೆ. ಇದೇ ಮೊದಲ ಬಾರಿಗೆ ಆಪ್ ಸಂಚಾಲಕ ಕೇಜ್ರಿವಾಲ್ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆ ನಡೆಸಿ ಪ್ರಚಾರ ನಡೆಸಿದ್ದಾರೆ. ಕರ್ನಾಟಕದಲ್ಲಿ ಆಪ್ ಸರ್ಕಾರ ಬರಬೇಕು. ನಾವು ಇಲ್ಲಿ ಸರ್ಕಾರ ರಚನೆ ಮಾಡೋಣ. ಈ ಮೂಲಕ 20%, 40% ದಂಧೆಗಳಿಗೆ ಕಡಿವಾಣ ಹಾಕೋಣ ಎಂದು ಕಹಳೆ ಊದಿದ್ದಾರೆ.
ಬಸವನ ಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಇಂದು ಆಪ್ ವತಿಯಿಂದ ರೈತ ಸಮಾವೇಶ ನಡೆಯಿತು. ಈ ವೇಳೆ ಕೇಜ್ರಿವಾಲ್ ಅವರಿಗೆ ಕೋಡಿಹಳ್ಳಿ ಚಂದ್ರಶೇಖರ್ ಹಸಿರು ಶಾಲು ಹಾಕಿದರೆ ಕೆಲ ದಿನಗಳ ಹಿಂದೆ ಆಪ್ ಸೇರಿದ್ದ ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬೃಹತ್ ಹೂವಿನ ಹಾರವನ್ನು ಹಾಕಿ ಸನ್ಮಾನಿಸಿದರು. ಕಾರ್ಯಕ್ರಮವನ್ನು ಕೇಜ್ರಿವಾಲ್ ಆವರು ವಿವಿಧ ಧಾನ್ಯಗಳು ಮತ್ತು ತರಕಾರಿಗಳ ರಾಶಿಗೆ ಪೂಜೆ ಮಾಡುವ ಮೂಲಕ ಬೃಹತ್ ರೈತ ಸಮಾವೇಶ ಉದ್ಘಾಟಿಸಿದರು.
ಕರ್ನಾಟಕದಲ್ಲಿ ಆಪ್ ಅಧಿಕಾರಕ್ಕೆ ಬರಬೇಕು. ನಾವು ಇಲ್ಲಿ ಸರ್ಕಾರ ರಚನೆ ಮಾಡೋಣ. 20%, 40% ದಂಧೆಗಳಿಗೆ ಕಡಿವಾಣ ಹಾಕೋಣ ಎಂದು ಕರೆ ಕೊಟ್ಟರು. ಇಡೀ ದೇಶದಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಚೆನ್ನಾಗಿಲ್ಲ. ದೆಹಲಿಯಲ್ಲಿ ಮಾತ್ರ ಉತ್ತಮ ಸರ್ಕಾರಿ ಶಾಲೆಗಳಿವೆ. ಇಂಥ ಸರ್ಕಾರಿ ಶಾಲೆಗಳನ್ನು ಕರ್ನಾಟಕದಲ್ಲೂ ಮಾಡೋಣ. ದೆಹಲಿಯಲ್ಲಿ ಅತ್ಯುತ್ತಮ ಸರ್ಕಾರಿ ಆಸ್ಪತ್ರೆ ಸೇವೆಗಳನ್ನ ಕೊಡ್ತಿದ್ದೇವೆ. ಆಸ್ಪತ್ರೆಯಲ್ಲಿ ಹೈಟೆಕ್ ಸೇವೆ ಸಿಗ್ತಿದೆ. ವಿದ್ಯುತ್ ದೆಹಲಿಯಲ್ಲಿ ಉಚಿತ. ಸರ್ಕಾರಿ ಶಾಲೆ, ವಿದ್ಯುತ್, ಆರೋಗ್ಯ, ನೀರು, ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ. ಇದು ಆಗಿದ್ದು ಒಂದು ಪ್ರಾಮಾಣಿಕ ರಾಜಕೀಯ ಪಕ್ಷ ಆಪ್ ನಿಂದ ಸಾಧ್ಯವಾಗಿದೆ ಎಂದು ಹೇಳಿದರು.
ಮನುಷ್ಯ ಅಹಂಕಾರ ಪಡಬಾರದು. ರಾವಣನೂ ಅಹಂಕಾರದಲ್ಲಿ ಮೆರೆದಿದ್ದ, ಸೀತೆ ಅಪಹರಣ ವೇಳೆ ರಾಮನ ಜೊತೆ ಸಂಘರ್ಷ ಬೇಡ ಎಂದು ವಿಭೀಷಣ ಹೇಳಿದ್ದ. ಆದರೆ ರಾವಣ ಒಪ್ಲಿಲ್ಲ, ಅಂತ್ಯ ಏನಾಯಿತು ಅಂತ ಎಲ್ಲರಿಗೂ ಗೊತ್ತಿದೆ. ಇದೇ ಥರ ಕೇಂದ್ರಕ್ಕೂ ಅಹಂಕಾರ ಇತ್ತು. ಮೂರು ರೈತ ವಿರೋಧಿ ಕಾನೂನು ತಂದ್ರು, ಎಷ್ಟೇ ಹೇಳಿದ್ರೂ ಕೇಂದ್ರ ಕೇಳಲಿಲ್ಲ. ರೈತರ ವಿರುದ್ಧ ನಡೆ ಬೇಡ ಅಂದ್ರೂ ಕೇಂದ್ರ ಕೇಳಿರಲಿಲ್ಲ. ಕೊನೆಗೂ 13 ತಿಂಗಳ ಬಳಿಕ ಕೇಂದ್ರದ ಅಹಂಕಾರ ಭಂಗವಾಯ್ತು. ಮೂರು ಕಾಯ್ದೆ ಕೇಂದ್ರ ವಾಪಸ್ ಪಡೆಯಿತು ಎಂದು ವಿವರಿಸಿದರು.
ಸ್ವಾತಂತ್ರ್ಯ ಬಂದಾಗಿಂದಲೂ ರೈತರ ಸ್ಥಿತಿ ಉತ್ತಮವಾಗಿಲ್ಲ. ನಾನು ಅಣ್ಣಾ ಹಜಾರೆ ಜೊತೆ ಹೋರಾಟ ಮಾಡ್ಕೊಂಡಿದ್ದೆ. ಭ್ರಷ್ಟಾಚಾರ ತೊಲಗಿಸಿ ಅಂತ ಅಣ್ಣಾಗೆ ಹೇಳಿದ್ದೆ ನಾನು. ಆಗ ಅವರು ನೀನು ಚುನಾವಣೆ ಗೆದ್ದು ಭ್ರಷ್ಟಾಚಾರ ಓಡಿಸು ಎಂದಿದ್ದರು. ನಾನು ಸಾಮಾನ್ಯ ಮನುಷ್ಯನನ್ನ ಕೆಣಕಬೇಡಿ ಅಂದೆ. ಅದರ ಪರಿಣಾಮ ಮೊದಲು ದೆಹಲಿಯಲ್ಲಿ ನಂತರ ಪಂಜಾಬ್ನಲ್ಲಿ ಆಪ್ ಸರ್ಕಾರ ರಚನೆಯಾಯಿತು. ಈಗ ನಮ್ಮ ಆದ್ಯತೆ ಕರ್ನಾಟಕ ಎಂದು ಹೇಳಿದರು.
ಈ ವೇಳೆ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿಯೇ ನಿವೃತ್ತ ಕೆಎಎಸ್ ಅಧಿಕಾರ ಕೆ.ಮಥಾಯಿ ಆಪ್ ಪಕ್ಷವನ್ನು ಸೇರಿದರು. ಇದೇ ವೇಳೆ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಆಮ್ ಆದ್ಮಿ ಪಾರ್ಟಿ ಸೇರಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…