ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವನ್ನು ಉಳಿಸುವುದಕ್ಕೆ ಲಕ್ಷಾಂತರ ಕಾರ್ಯಕರ್ತರು ದುಡಿದಿದ್ದಾರೆ: ಎಚ್.ಡಿ.ದೇವೇಗೌಡ – Vishwanews24
ಬೆಂಗಳೂರು: ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮುಂದಾಗಿದ್ದೇವೆ. 30 ಜಿಲ್ಲೆಗಳಲ್ಲೂ ಕಾರ್ಯಕರ್ತರ ಸಭೆ ಮಾಡಲು ಯೋಜಿಸಿದ್ದೇವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹೇಳಿದರು.
ಯಶವಂಶಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರದಾನಿ ಹೆಚ್ಡಿ ದೇವೆಗೌಡರು, ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷವನ್ನು ಉಳಿಸುವುದಕ್ಕೆ ಲಕ್ಷಾಂತರ ಕಾರ್ಯಕರ್ತರು ದುಡಿದಿದ್ದಾರೆ. ಕೆಲವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಕಳೆದ ಚುನಾವಣೆಯಲ್ಲಿ ಎಲ್ಲಾ ಮತದಾರರ ಹೋರಾಟದ ಫಲವಾಗಿ ಒಂದು ಲಕ್ಷ ಮತ ಪಡೆದಿದ್ದೇವೆ. ಎಂದು ಹೇಳಿದರು.
ರಾಹುಲ್ ಗಾಂಧಿ ಒಬ್ಬ ಯುವಕ ಮುಖಂಡ. ರಾಜ್ಯ ರಾಜಕಾರಣವನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳೋಕೆ ಸಾಧ್ಯವಾಗಿಲ್ಲ. ಚುನಾವಣಾ ಪ್ರಚಾರಕ್ಕೆ ಹಾಸನಕ್ಕೆ ಬಂದಾಗ ದೇವೇಗೌಡ್ರು ಭಾರತೀಯ ಜನತಾ ಪಕ್ಷದ ಬಿ ಟೀಮ್ ಅಂತ ಹೇಳಿದ್ರು. ಕೆಲ ಕಾಂಗ್ರೆಸ್ ಮುಖಂಡರು ಅವರಿಗೆ ನೀಡಿದ ಚೀಟಿಯಂತೆ ರಾಹುಲ್ ಗಾಂಧಿ ಹಾಗೆ ಹೇಳುತ್ತಾರೆ. ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯವರ ಬಾಯಲ್ಲಿ ಈ ಮಾತುಗಳನ್ನು ನುಡಿಸಿದ್ದಾರೆ. ಇಂತಹ ಹೇಳಿಕೆಗಳಿಂದ ಹಾಸನದಲ್ಲಿ ಕಾಂಗ್ರೆಸ್ ಸೋತಿದೆ. ಹೀಗಾಗಿ ನಾವು 26 ಸ್ಥಾನಗಳನ್ನು ನಾವು ಕಳೆದುಕೊಂಡಿದ್ದೇವೆ. ಜೆಡಿಎಸ್ನಿಂದ ಹೋದ 8 ಶಾಸಕರ ಕ್ಷೇತ್ರಗಳು ಸೇರಿದಂತೆ 130 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಇಲ್ಲ. ನನ್ನನ್ನ, ನಮ್ಮ ಪಕ್ಷವನ್ನು ಮುಗಿಸುವ ಪ್ರಯತ್ನ ಮಾಡಿ ಅವರೇ ಸೋತು ಹೋದರು ಎಂದು ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
