ನವದೆಹಲಿ: ಕರ್ನಾಟಕದಲ್ಲಿ ಪ್ರಜಾಪ್ರಭುತ್ವದಲ್ಲಿನ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ವಿಶ್ವಾಸ ಮತ ಗಳಿಸಲು ಹರ ಸಾಹಸಪಟ್ಟ ಮೈತ್ರಿ ಸರ್ಕಾರ, ವಿಶ್ವಾಸಮತ ಸಾಬೀತು ಪಡಿಸುವಲ್ಲಿ ವಿಫಲವಾದರು. ಹೀಗಾಗಿ ಬಿಜೆಪಿ, ಸರ್ಕಾರ ರಚನೆ ಮಾಡಲು ಎಲ್ಲಾ ರೀತಿಯಾಗಿ ತಯಾರಾಗಿತ್ತು.
ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭವಾದ ದಿನದಿಂದಲೂ ಸರ್ಕಾರಕ್ಕೆ ಪಟ್ಟಭದ್ರ ಹಿತಾಸಕ್ತಿಗಳ ಬೆದರಿಕೆ ಇತ್ತು. ಅದರ ನಂತರವೂ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ತನ್ನ ಅಭಿವೃದ್ಧಿ ಪಥದಲ್ಲಿರುವ ಅಡಚಣೆಗಳನ್ನು ಬೆದರಿಕೆಗಳನ್ನು ಎದುರಿಸಿಕೊಂಡು ಸಾಗುತ್ತಿತ್ತು. ಆದರೆ ಕೊನೆಗೂ ಬಿಜೆಪಿಯ ದುರಾಸೆ ಗೆದ್ದಿದ್ದು, ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಮತ್ತು ಕರ್ನಾಟಕದ ಜನತೆಗೆ ಸೋಲಾಗಿದೆ” ಎಂದು ಹೇಳಿಕೊಂಡಿದ್ದಾರೆ.
ಕಾಂಗ್ರೆಸ್ ಮೈತ್ರಿ ಸರ್ಕಾರದ ಶಾಸಕರಿಗೆ ಬಿಜೆಪಿ ಹಣದ ಆಸೆ ತೋರಿಸಿ, ಅವರನ್ನು ಬೆದರಿಸಿ ರಾಜೀನಾಮೆ ಕೊಡಿಸಿದೆ ಎಂಬ ಆರೋಪ ಮಾಡಿದೆ.
ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ಇಡಲೇಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್ ಈ ಮೈತ್ರಿಗೆ ಸಮ್ಮತಿ ನೀಡಿತ್ತು. ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಅಂದು ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಕೂಡ ಪ್ರಮುಖಪಾತ್ರ ವಹಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…