ರಾಮನಗರ: ‘ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ. ಅವರಿಂದ ನನ್ನನ್ನು ಏನೂ ಮಾಡಲು ಆಗುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಚನ್ನಪಟ್ಟಣದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘2006ರಲ್ಲಿ ಬಿಜೆಪಿಯವರೆಲ್ಲ ಮಂಗನ ತರ ಇನ್ನೊಂದು ಪಕ್ಷಕ್ಕೆ ಹಾರಲು ರೆಡಿಯಾಗಿದ್ದರು. ಇದೇ ಯಡಿಯೂರಪ್ಪ ಅರ್ಜಿ ಹಾಕಿಕೊಂಡು ನನ್ನ ಹತ್ತಿರ ಬಂದಿದ್ದರು. ನನ್ನನ್ನು ಮಂತ್ರಿ ಮಾಡಿ. ಬಿಜೆಪಿಗೆ ರಾಜೀನಾಮೆ ಕೊಡುತ್ತೇನೆ ಎಂದು ಅಂಗಲಾಚಿದ್ದರು’ ಎಂದು ದೂರಿದರು.
‘ರಾಮನಗರ ಜಿಲ್ಲೆಯಿಂದ ನನ್ನನ್ನು ಖಾಲಿ ಮಾಡಿಸಲು ಎಲ್ಲ ಒಟ್ಟಾಗಿ ನಿಂತಿದ್ದಾರೆ. ಆದರೆ ದೇವೇಗೌಡರ ಕುಟುಂಬದವರ ಕೊಡುಗೆ ಏನೆಂಬುದು ಜಿಲ್ಲೆಯ ಜನರಿಗೆ ಗೊತ್ತಿದೆ. ನಾನು ಬಂಡೆ ಒಡೆದಿಲ್ಲ. ಜನರ ಹಣ ಲೂಟಿ ಮಾಡಿಲ್ಲ. ನಾನು ಈ ಮಣ್ಣಿನ ಮಗ. ನನ್ನ ಅಂತಿಮ ಕಾಲ ರಾಮನಗರದಲ್ಲಿಯೇ’ ಎಂದರು.
ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ‘ಆತ ಜನರ ತಲೆ ಹೊಡೆದ ಹಣದಲ್ಲಿ ಮಂತ್ರಿ ಆಗಿದ್ದಾನೆ. ಮೆಗಾ ಸಿಟಿ ಹೆಸರಲ್ಲಿ ಜನರಿಗೆ ಸೈಟು ಕೊಡುತ್ತೇನೆ ಎಂದು ಹೇಳಿ ಅವರ ಹಣವನ್ನು ಲೂಟಿ ಮಾಡಿದ್ದಾನೆ. ಯಡಿಯೂರಪ್ಪನನ್ನು, ಆರ್ಎಸ್ಎಸ್ ನಾಯಕರನ್ನು ಮೆಚ್ಚಿಸಲು ಮಾತನಾಡುತ್ತಾನೆ. ನನ್ನ ಬಯ್ದುಕೊಂಡು ಹೊಟ್ಟೆಪಾಡು ಮಾಡ್ತಿದ್ದಾನೆ. ಚನ್ನಪಟ್ಟಣದಲ್ಲಿ ನನ್ನನ್ನು ಏನೂ ಮಾಡಲು ಆಗಲ್ಲ ಎನ್ನುವುದು ಆತನಿಗೆ ಚೆನ್ನಾಗಿ ಗೊತ್ತಿದೆ’ ಎಂದರು.
‘ಚನ್ನಪಟ್ಟಣ ಈಗಾಗಲೇ ಆತನ ಕೈಬಿಟ್ಟು ಹೋಗಿದೆ. ಇಲ್ಲಿನ ಜನ ಆತನನ್ನು ದೂರ ಇಟ್ಟಿದ್ದಾರೆ. ಮುಂದಿನ ರಾಜಕೀಯ ಭವಿಷ್ಯ ಏನು ಎಂಬುದು ಆತನನ್ನು ಕಾಡುತ್ತಿದೆ. ಹೀಗಾಗಿ ಮಂಗಳೂರಿಗೆ ಹೋಗಿ ಅಲ್ಲಿನ ಬಗ್ಗೆ ಹೇಳದೇ ಚನ್ನಪಟ್ಟಣದ ಬಗ್ಗೆ ಮಾತನಾಡಿದ್ದಾನೆ. ಈ ಹಿಂದೆ ಹುಣಸೂರಿಗೆ ಹೋಗಿ ಸೀರೆ ಹಂಚಿ ಜನರ ಕೇಳುವ ಪ್ರಯತ್ನ ನಡೆಸಿದ್ದ. ಇದೇ ವ್ಯಕ್ತಿ ಚನ್ನಪಟ್ಟಣದಲ್ಲಿ ಕೊರೊನಾ ಬಂದಾಗ ಎಲ್ಲಿ ಹೋಗಿದ್ದ’ ಎಂದು ಪ್ರಶ್ನಿಸಿದರು.
‘ದೇವೇಗೌಡರು ಇಗ್ಗಲೂರು ಜಲಾಶಯ ಕಟ್ಟಿಸಿದಾಗ ಈತ ಹುಟ್ಟಿದ್ದನೋ ಇಲ್ಲವೋ ಗೊತ್ತಿಲ್ಲ. ಆದರೆ ಅದೇ ಜಲಾಶಯದಿಂದ ನೀರು ತುಂಬಿಸಿ ಆಧುನಿಕ ಭಗೀರಥ ಎಂದು ಬೋರ್ಡು ಹಾಕಿಸಿಕೊಂಡಿದ್ದಾನೆ. ನೀನು ಕಲಾವಿದರ ಕೋಟಾದಲ್ಲಿ ಆಯ್ಕೆ ಆಗಿದ್ದೀಯಾ. ರಾಜ್ಯದಲ್ಲಿ ಸಾಕಷ್ಟು ಕಲಾವಿದರು ಸಂಕಷ್ಟದಲ್ಲಿ ಇದ್ದಾರೆ. ಮೊದಲು ಅವರ ಕಷ್ಟ ನೋಡಿಕೋ. ಚನ್ನಪಟ್ಟಣ ನೋಡಿಕೊಳ್ಳಲು ನಾನಿದ್ದೇನೆ’ ಎಂದರು.
ಡಿವೈಡರ್ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…