Featured

ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್‌ ಕೊಟ್ಟಿದ್ದು ನಾನೇ : ಕುಮಾರಸ್ವಾಮಿ -Vishwanews24

ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್‌ ಕೊಟ್ಟಿದ್ದು ನಾನೇ, ಅವರಿಂದ ನನ್ನನ್ನು ಏನೂ ಮಾಡಲು ಆಗುವುದಿಲ್ಲ : ಕುಮಾರಸ್ವಾಮಿ -Vishwanews24

ರಾಮನಗರ: ‘ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್‌ ಕೊಟ್ಟಿದ್ದು ನಾನೇ. ಅವರಿಂದ ನನ್ನನ್ನು ಏನೂ ಮಾಡಲು ಆಗುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘2006ರಲ್ಲಿ ಬಿಜೆಪಿಯವರೆಲ್ಲ ಮಂಗನ ತರ ಇನ್ನೊಂದು ಪಕ್ಷಕ್ಕೆ ಹಾರಲು ರೆಡಿಯಾಗಿದ್ದರು. ಇದೇ ಯಡಿಯೂರಪ್ಪ ಅರ್ಜಿ ಹಾಕಿಕೊಂಡು ನನ್ನ ಹತ್ತಿರ ಬಂದಿದ್ದರು. ನನ್ನನ್ನು ಮಂತ್ರಿ ಮಾಡಿ. ಬಿಜೆಪಿಗೆ ರಾಜೀನಾಮೆ ಕೊಡುತ್ತೇನೆ ಎಂದು ಅಂಗಲಾಚಿದ್ದರು’ ಎಂದು ದೂರಿದರು.

ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ : ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ -Vishwanews24

‘ರಾಮನಗರ ಜಿಲ್ಲೆಯಿಂದ ನನ್ನನ್ನು ಖಾಲಿ ಮಾಡಿಸಲು ಎಲ್ಲ ಒಟ್ಟಾಗಿ ನಿಂತಿದ್ದಾರೆ. ಆದರೆ ದೇವೇಗೌಡರ ಕುಟುಂಬದವರ ಕೊಡುಗೆ ಏನೆಂಬುದು ಜಿಲ್ಲೆಯ ಜನರಿಗೆ ಗೊತ್ತಿದೆ. ನಾನು ಬಂಡೆ ಒಡೆದಿಲ್ಲ. ಜನರ ಹಣ ಲೂಟಿ ಮಾಡಿಲ್ಲ. ನಾನು ಈ ಮಣ್ಣಿನ ಮಗ. ನನ್ನ ಅಂತಿಮ ಕಾಲ ರಾಮನಗರದಲ್ಲಿಯೇ’ ಎಂದರು.

ಸಚಿವ ಸಿ.ಪಿ. ಯೋಗೇಶ್ವರ್‌ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ‘ಆತ ಜನರ ತಲೆ ಹೊಡೆದ ಹಣದಲ್ಲಿ ಮಂತ್ರಿ ಆಗಿದ್ದಾನೆ. ಮೆಗಾ ಸಿಟಿ ಹೆಸರಲ್ಲಿ ಜನರಿಗೆ ಸೈಟು ಕೊಡುತ್ತೇನೆ ಎಂದು ಹೇಳಿ ಅವರ ಹಣವನ್ನು ಲೂಟಿ ಮಾಡಿದ್ದಾನೆ. ಯಡಿಯೂರಪ್ಪನನ್ನು, ಆರ್‌ಎಸ್ಎಸ್‌ ನಾಯಕರನ್ನು ಮೆಚ್ಚಿಸಲು ಮಾತನಾಡುತ್ತಾನೆ. ನನ್ನ ಬಯ್ದುಕೊಂಡು ಹೊಟ್ಟೆಪಾಡು ಮಾಡ್ತಿದ್ದಾನೆ. ಚನ್ನಪಟ್ಟಣದಲ್ಲಿ ನನ್ನನ್ನು ಏನೂ ಮಾಡಲು ಆಗಲ್ಲ ಎನ್ನುವುದು ಆತನಿಗೆ ಚೆನ್ನಾಗಿ ಗೊತ್ತಿದೆ’ ಎಂದರು.

‘ಚನ್ನಪಟ್ಟಣ ಈಗಾಗಲೇ ಆತನ ಕೈಬಿಟ್ಟು ಹೋಗಿದೆ. ಇಲ್ಲಿನ ಜನ ಆತನನ್ನು ದೂರ ಇಟ್ಟಿದ್ದಾರೆ. ಮುಂದಿನ ರಾಜಕೀಯ ಭವಿಷ್ಯ ಏನು ಎಂಬುದು ಆತನನ್ನು ಕಾಡುತ್ತಿದೆ. ಹೀಗಾಗಿ ಮಂಗಳೂರಿಗೆ ಹೋಗಿ ಅಲ್ಲಿನ ಬಗ್ಗೆ ಹೇಳದೇ ಚನ್ನಪಟ್ಟಣದ ಬಗ್ಗೆ ಮಾತನಾಡಿದ್ದಾನೆ. ಈ ಹಿಂದೆ ಹುಣಸೂರಿಗೆ ಹೋಗಿ ಸೀರೆ ಹಂಚಿ ಜನರ ಕೇಳುವ ಪ್ರಯತ್ನ ನಡೆಸಿದ್ದ. ಇದೇ ವ್ಯಕ್ತಿ ಚನ್ನಪಟ್ಟಣದಲ್ಲಿ ಕೊರೊನಾ ಬಂದಾಗ ಎಲ್ಲಿ ಹೋಗಿದ್ದ’ ಎಂದು ಪ್ರಶ್ನಿಸಿದರು.

2018ರಿಂದ 2020ರವರೆಗಿನ ಮೂರು ಸಾಲುಗಳ ತುಳು ಅಕಾಡೆಮಿ ಪ್ರಶಸ್ತಿ ಪ್ರಕಟಸಿ, ಮಾರ್ಚ್ 7ರಂದು ಬೆಂಗಳೂರಿನಲ್ಲಿ ವಿತರಣೆ -Vishwanews24

‘ದೇವೇಗೌಡರು ಇಗ್ಗಲೂರು ಜಲಾಶಯ ಕಟ್ಟಿಸಿದಾಗ ಈತ ಹುಟ್ಟಿದ್ದನೋ ಇಲ್ಲವೋ ಗೊತ್ತಿಲ್ಲ. ಆದರೆ ಅದೇ ಜಲಾಶಯದಿಂದ ನೀರು ತುಂಬಿಸಿ ಆಧುನಿಕ ಭಗೀರಥ ಎಂದು ಬೋರ್ಡು ಹಾಕಿಸಿಕೊಂಡಿದ್ದಾನೆ. ನೀನು ಕಲಾವಿದರ ಕೋಟಾದಲ್ಲಿ ಆಯ್ಕೆ ಆಗಿದ್ದೀಯಾ. ರಾಜ್ಯದಲ್ಲಿ ಸಾಕಷ್ಟು ಕಲಾವಿದರು ಸಂಕಷ್ಟದಲ್ಲಿ ಇದ್ದಾರೆ. ಮೊದಲು ಅವರ ಕಷ್ಟ ನೋಡಿಕೋ. ಚನ್ನಪಟ್ಟಣ ನೋಡಿಕೊಳ್ಳಲು ನಾನಿದ್ದೇನೆ’ ಎಂದರು.

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

10 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

11 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

11 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

11 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

12 hours ago