Featured

ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್‌ ಕೊಟ್ಟಿದ್ದು ನಾನೇ : ಕುಮಾರಸ್ವಾಮಿ -Vishwanews24

ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್‌ ಕೊಟ್ಟಿದ್ದು ನಾನೇ, ಅವರಿಂದ ನನ್ನನ್ನು ಏನೂ ಮಾಡಲು ಆಗುವುದಿಲ್ಲ : ಕುಮಾರಸ್ವಾಮಿ -Vishwanews24

ರಾಮನಗರ: ‘ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್‌ ಕೊಟ್ಟಿದ್ದು ನಾನೇ. ಅವರಿಂದ ನನ್ನನ್ನು ಏನೂ ಮಾಡಲು ಆಗುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘2006ರಲ್ಲಿ ಬಿಜೆಪಿಯವರೆಲ್ಲ ಮಂಗನ ತರ ಇನ್ನೊಂದು ಪಕ್ಷಕ್ಕೆ ಹಾರಲು ರೆಡಿಯಾಗಿದ್ದರು. ಇದೇ ಯಡಿಯೂರಪ್ಪ ಅರ್ಜಿ ಹಾಕಿಕೊಂಡು ನನ್ನ ಹತ್ತಿರ ಬಂದಿದ್ದರು. ನನ್ನನ್ನು ಮಂತ್ರಿ ಮಾಡಿ. ಬಿಜೆಪಿಗೆ ರಾಜೀನಾಮೆ ಕೊಡುತ್ತೇನೆ ಎಂದು ಅಂಗಲಾಚಿದ್ದರು’ ಎಂದು ದೂರಿದರು.

ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ : ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ -Vishwanews24

‘ರಾಮನಗರ ಜಿಲ್ಲೆಯಿಂದ ನನ್ನನ್ನು ಖಾಲಿ ಮಾಡಿಸಲು ಎಲ್ಲ ಒಟ್ಟಾಗಿ ನಿಂತಿದ್ದಾರೆ. ಆದರೆ ದೇವೇಗೌಡರ ಕುಟುಂಬದವರ ಕೊಡುಗೆ ಏನೆಂಬುದು ಜಿಲ್ಲೆಯ ಜನರಿಗೆ ಗೊತ್ತಿದೆ. ನಾನು ಬಂಡೆ ಒಡೆದಿಲ್ಲ. ಜನರ ಹಣ ಲೂಟಿ ಮಾಡಿಲ್ಲ. ನಾನು ಈ ಮಣ್ಣಿನ ಮಗ. ನನ್ನ ಅಂತಿಮ ಕಾಲ ರಾಮನಗರದಲ್ಲಿಯೇ’ ಎಂದರು.

ಸಚಿವ ಸಿ.ಪಿ. ಯೋಗೇಶ್ವರ್‌ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ‘ಆತ ಜನರ ತಲೆ ಹೊಡೆದ ಹಣದಲ್ಲಿ ಮಂತ್ರಿ ಆಗಿದ್ದಾನೆ. ಮೆಗಾ ಸಿಟಿ ಹೆಸರಲ್ಲಿ ಜನರಿಗೆ ಸೈಟು ಕೊಡುತ್ತೇನೆ ಎಂದು ಹೇಳಿ ಅವರ ಹಣವನ್ನು ಲೂಟಿ ಮಾಡಿದ್ದಾನೆ. ಯಡಿಯೂರಪ್ಪನನ್ನು, ಆರ್‌ಎಸ್ಎಸ್‌ ನಾಯಕರನ್ನು ಮೆಚ್ಚಿಸಲು ಮಾತನಾಡುತ್ತಾನೆ. ನನ್ನ ಬಯ್ದುಕೊಂಡು ಹೊಟ್ಟೆಪಾಡು ಮಾಡ್ತಿದ್ದಾನೆ. ಚನ್ನಪಟ್ಟಣದಲ್ಲಿ ನನ್ನನ್ನು ಏನೂ ಮಾಡಲು ಆಗಲ್ಲ ಎನ್ನುವುದು ಆತನಿಗೆ ಚೆನ್ನಾಗಿ ಗೊತ್ತಿದೆ’ ಎಂದರು.

‘ಚನ್ನಪಟ್ಟಣ ಈಗಾಗಲೇ ಆತನ ಕೈಬಿಟ್ಟು ಹೋಗಿದೆ. ಇಲ್ಲಿನ ಜನ ಆತನನ್ನು ದೂರ ಇಟ್ಟಿದ್ದಾರೆ. ಮುಂದಿನ ರಾಜಕೀಯ ಭವಿಷ್ಯ ಏನು ಎಂಬುದು ಆತನನ್ನು ಕಾಡುತ್ತಿದೆ. ಹೀಗಾಗಿ ಮಂಗಳೂರಿಗೆ ಹೋಗಿ ಅಲ್ಲಿನ ಬಗ್ಗೆ ಹೇಳದೇ ಚನ್ನಪಟ್ಟಣದ ಬಗ್ಗೆ ಮಾತನಾಡಿದ್ದಾನೆ. ಈ ಹಿಂದೆ ಹುಣಸೂರಿಗೆ ಹೋಗಿ ಸೀರೆ ಹಂಚಿ ಜನರ ಕೇಳುವ ಪ್ರಯತ್ನ ನಡೆಸಿದ್ದ. ಇದೇ ವ್ಯಕ್ತಿ ಚನ್ನಪಟ್ಟಣದಲ್ಲಿ ಕೊರೊನಾ ಬಂದಾಗ ಎಲ್ಲಿ ಹೋಗಿದ್ದ’ ಎಂದು ಪ್ರಶ್ನಿಸಿದರು.

2018ರಿಂದ 2020ರವರೆಗಿನ ಮೂರು ಸಾಲುಗಳ ತುಳು ಅಕಾಡೆಮಿ ಪ್ರಶಸ್ತಿ ಪ್ರಕಟಸಿ, ಮಾರ್ಚ್ 7ರಂದು ಬೆಂಗಳೂರಿನಲ್ಲಿ ವಿತರಣೆ -Vishwanews24

‘ದೇವೇಗೌಡರು ಇಗ್ಗಲೂರು ಜಲಾಶಯ ಕಟ್ಟಿಸಿದಾಗ ಈತ ಹುಟ್ಟಿದ್ದನೋ ಇಲ್ಲವೋ ಗೊತ್ತಿಲ್ಲ. ಆದರೆ ಅದೇ ಜಲಾಶಯದಿಂದ ನೀರು ತುಂಬಿಸಿ ಆಧುನಿಕ ಭಗೀರಥ ಎಂದು ಬೋರ್ಡು ಹಾಕಿಸಿಕೊಂಡಿದ್ದಾನೆ. ನೀನು ಕಲಾವಿದರ ಕೋಟಾದಲ್ಲಿ ಆಯ್ಕೆ ಆಗಿದ್ದೀಯಾ. ರಾಜ್ಯದಲ್ಲಿ ಸಾಕಷ್ಟು ಕಲಾವಿದರು ಸಂಕಷ್ಟದಲ್ಲಿ ಇದ್ದಾರೆ. ಮೊದಲು ಅವರ ಕಷ್ಟ ನೋಡಿಕೋ. ಚನ್ನಪಟ್ಟಣ ನೋಡಿಕೊಳ್ಳಲು ನಾನಿದ್ದೇನೆ’ ಎಂದರು.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

17 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

20 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

20 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

21 hours ago