Featured

ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದವರು ಬಿ.ಎಸ್.ಯಡಿಯೂರಪ್ಪ, ಅವರಿಲ್ಲಾಂದ್ರೆ ಬಿಜೆಪಿ ಇಲ್ಲ : ವಾಟಾಳ್ ನಾಗರಾಜ್ -Vishwanews24

ಚಾಮರಾಜನಗರ: ಯಡಿಯೂರಪ್ಪ ನನ್ನ ನಂಬರ್ 1 ಶತ್ರು, ಆದರೆ ಅವರಿಲ್ಲ ಎಂದರೆ ಬಿಜೆಪಿ ಇಲ್ಲ , ಯಡಿಯೂರಪ್ಪ ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದವರು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಚಾಮರಾಜನಗರದಲ್ಲಿಂದು ಬಿಎಸ್​ವೈ ಅವರನ್ನು ತೆಗಳುವ ಮೂಲಕ ಹೊಗಳಿದರು.

ಬಂಡಿಪುರದ ಮದ್ದೂರು ಚೆಕಪೋಸ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದವರು ಬಿ.ಎಸ್.ಯಡಿಯೂರಪ್ಪ, ಸರ್ಕಾರ ತಂದವರು ಯಡಿಯೂರಪ್ಪ, ಅವರಿಲ್ಲ ಎಂದರೆ ಬಿಜೆಪಿಯೂ ಇಲ್ಲ,  ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತ ಯಡಿಯೂರಪ್ಪ ನನ್ನ ನಂಬರ್ 1 ಶತ್ರು ನನ್ನ ಸೋಲಿಸಲು 10 ವರ್ಷಗಳ ಕಾಲ ನನ್ನ ವಿರುದ್ಧ ಅಭ್ಯರ್ಥಿಯನ್ನ ನಿಲ್ಲಿಸಿದರು. ಹಾಗಾಗಿ ನನಗೆ ಬಿಎಸ್​​ವೈ ನನಗೆ ಶತ್ರು. ಆದರೂ ರಾಜ್ಯದಲ್ಲಿ ಯಡಿಯೂರಪ್ಪ, ಅವರಿಲ್ಲ ಎಂದರೆ ಬಿಜೆಪಿಯೂ ಇಲ್ಲ, ಈಶ್ವರಪ್ಪನೂ ಇಲ್ಲ, ಯಾವ ಅಪ್ಪನೂ ಇಲ್ಲಾ ಎಂದು ಒಂದು ಕಡೆ ತೆಗಳಿ ಮತ್ತೊಂದು ಕಡೆ ಹೊಗಳಿದರು.

ಇತ್ತ ದಸರಾ ಆಚರಣೆ ಕುರಿತು ಮಾತನಾಡಿ, ದಸರಾ ನಾಡಹಬ್ಬ. ಆದರೆ ಯಾವ ಸರ್ಕಾರ ಬರುವುದೋ ಆ ದಸರಾ ಆಗುತ್ತಿರುವುದು ಸರಿಯಲ್ಲ. ವಿಶ್ವವಿಖ್ಯಾತ ದಸರಾ ಬರಬರುತ್ತಾ ಮೈಸೂರಿಗೆ ಸೀಮಿತವಾಗುತ್ತಿದೆ. ಆದ್ದರಿಂದ ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷಗಳನ್ನು ಒಳಗೊಂಡಂತೆ ಸಮಿತಿ ರಚಿಸಬೇಕು ಎಂದು ಹೇಳಿದರು.’ಇಲ್ಲಿ ದರ್ಬಾರು, ಉತ್ತರ ಕರ್ನಾಟಕದಲ್ಲಿ ಕಣ್ಣೀರು’ ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಯದುವಂಶಸ್ಥ ಯದುವೀರ್ ಬಿಡಬೇಕಿತ್ತು. ದಸರಾ ದರ್ಬಾರ್ ಬಿಟ್ಟು ಉತ್ತರ ಕರ್ನಾಟಕ ಜನರ ಸಮಸ್ಯೆ ಕೇಳಬೇಕಿತ್ತು .ಉತ್ತರ ಕರ್ನಾಟಕದ ಜನ ನೀರಿನಲ್ಲಿ ಮುಳುಗಿದ್ದಾರೆ ಎಂದರು.

ಪ್ರಧಾನಿ ಮೋದಿ ವೈಭವದಿಂದ ಅಮೆರಿಕಾಕ್ಕೆ ಹೋಗಿ ಬಂದಿದ್ದಾರೆ, ಕರ್ನಾಟಕಕ್ಕೇ ಅವರು ಬರಲಿಲ್ಲ? ರಾಜ್ಯದವರನ್ನು ಗುಲಾಮರಂತೆ ಕಾಣುತ್ತಿರುವುದು ಸರಿಯಲ್ಲ. ಇದರ ವಿರುದ್ಧ ಹೋರಾಟ ಅನಿವಾರ್ಯ, ಉತ್ತರ ಕರ್ನಾಟಕಕ್ಕೆ ಅಗೌರವ ತೋರಿ ಪರಿಹಾರ ನೀಡದಿದ್ದರೆ ರಾಜ್ಯವೇ ಧಗಧಗ ಎನ್ನಲಿದೆ ಎಂದು ಎಚ್ಚರಿಸಿದರು. ಗಣಿ ಮಾಲೀಕರ ದರ್ಬಾರಿನಲ್ಲಿ ಯಾವುದೇ ಕಾರಣಕ್ಕೂ ಬಳ್ಳಾರಿ ವಿಭಜನೆ ಆಗಬಾರದು ಎಂದು ಗುಡುಗಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

17 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

17 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

18 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

18 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

20 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

20 hours ago