Featured

ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದವರು ಬಿ.ಎಸ್.ಯಡಿಯೂರಪ್ಪ, ಅವರಿಲ್ಲಾಂದ್ರೆ ಬಿಜೆಪಿ ಇಲ್ಲ : ವಾಟಾಳ್ ನಾಗರಾಜ್ -Vishwanews24

ಚಾಮರಾಜನಗರ: ಯಡಿಯೂರಪ್ಪ ನನ್ನ ನಂಬರ್ 1 ಶತ್ರು, ಆದರೆ ಅವರಿಲ್ಲ ಎಂದರೆ ಬಿಜೆಪಿ ಇಲ್ಲ , ಯಡಿಯೂರಪ್ಪ ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದವರು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಚಾಮರಾಜನಗರದಲ್ಲಿಂದು ಬಿಎಸ್​ವೈ ಅವರನ್ನು ತೆಗಳುವ ಮೂಲಕ ಹೊಗಳಿದರು.

ಬಂಡಿಪುರದ ಮದ್ದೂರು ಚೆಕಪೋಸ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದವರು ಬಿ.ಎಸ್.ಯಡಿಯೂರಪ್ಪ, ಸರ್ಕಾರ ತಂದವರು ಯಡಿಯೂರಪ್ಪ, ಅವರಿಲ್ಲ ಎಂದರೆ ಬಿಜೆಪಿಯೂ ಇಲ್ಲ,  ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತ ಯಡಿಯೂರಪ್ಪ ನನ್ನ ನಂಬರ್ 1 ಶತ್ರು ನನ್ನ ಸೋಲಿಸಲು 10 ವರ್ಷಗಳ ಕಾಲ ನನ್ನ ವಿರುದ್ಧ ಅಭ್ಯರ್ಥಿಯನ್ನ ನಿಲ್ಲಿಸಿದರು. ಹಾಗಾಗಿ ನನಗೆ ಬಿಎಸ್​​ವೈ ನನಗೆ ಶತ್ರು. ಆದರೂ ರಾಜ್ಯದಲ್ಲಿ ಯಡಿಯೂರಪ್ಪ, ಅವರಿಲ್ಲ ಎಂದರೆ ಬಿಜೆಪಿಯೂ ಇಲ್ಲ, ಈಶ್ವರಪ್ಪನೂ ಇಲ್ಲ, ಯಾವ ಅಪ್ಪನೂ ಇಲ್ಲಾ ಎಂದು ಒಂದು ಕಡೆ ತೆಗಳಿ ಮತ್ತೊಂದು ಕಡೆ ಹೊಗಳಿದರು.

ಇತ್ತ ದಸರಾ ಆಚರಣೆ ಕುರಿತು ಮಾತನಾಡಿ, ದಸರಾ ನಾಡಹಬ್ಬ. ಆದರೆ ಯಾವ ಸರ್ಕಾರ ಬರುವುದೋ ಆ ದಸರಾ ಆಗುತ್ತಿರುವುದು ಸರಿಯಲ್ಲ. ವಿಶ್ವವಿಖ್ಯಾತ ದಸರಾ ಬರಬರುತ್ತಾ ಮೈಸೂರಿಗೆ ಸೀಮಿತವಾಗುತ್ತಿದೆ. ಆದ್ದರಿಂದ ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷಗಳನ್ನು ಒಳಗೊಂಡಂತೆ ಸಮಿತಿ ರಚಿಸಬೇಕು ಎಂದು ಹೇಳಿದರು.’ಇಲ್ಲಿ ದರ್ಬಾರು, ಉತ್ತರ ಕರ್ನಾಟಕದಲ್ಲಿ ಕಣ್ಣೀರು’ ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಯದುವಂಶಸ್ಥ ಯದುವೀರ್ ಬಿಡಬೇಕಿತ್ತು. ದಸರಾ ದರ್ಬಾರ್ ಬಿಟ್ಟು ಉತ್ತರ ಕರ್ನಾಟಕ ಜನರ ಸಮಸ್ಯೆ ಕೇಳಬೇಕಿತ್ತು .ಉತ್ತರ ಕರ್ನಾಟಕದ ಜನ ನೀರಿನಲ್ಲಿ ಮುಳುಗಿದ್ದಾರೆ ಎಂದರು.

ಪ್ರಧಾನಿ ಮೋದಿ ವೈಭವದಿಂದ ಅಮೆರಿಕಾಕ್ಕೆ ಹೋಗಿ ಬಂದಿದ್ದಾರೆ, ಕರ್ನಾಟಕಕ್ಕೇ ಅವರು ಬರಲಿಲ್ಲ? ರಾಜ್ಯದವರನ್ನು ಗುಲಾಮರಂತೆ ಕಾಣುತ್ತಿರುವುದು ಸರಿಯಲ್ಲ. ಇದರ ವಿರುದ್ಧ ಹೋರಾಟ ಅನಿವಾರ್ಯ, ಉತ್ತರ ಕರ್ನಾಟಕಕ್ಕೆ ಅಗೌರವ ತೋರಿ ಪರಿಹಾರ ನೀಡದಿದ್ದರೆ ರಾಜ್ಯವೇ ಧಗಧಗ ಎನ್ನಲಿದೆ ಎಂದು ಎಚ್ಚರಿಸಿದರು. ಗಣಿ ಮಾಲೀಕರ ದರ್ಬಾರಿನಲ್ಲಿ ಯಾವುದೇ ಕಾರಣಕ್ಕೂ ಬಳ್ಳಾರಿ ವಿಭಜನೆ ಆಗಬಾರದು ಎಂದು ಗುಡುಗಿದರು.

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

13 minutes ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

31 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago