Featured

ಕರ್ನಾಟಕದಲ್ಲಿ ಮೊದಲ ಬಾರಿಗೆ  ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ -Vishwanews24

ಕರ್ನಾಟಕದಲ್ಲಿ ಮೊದಲ ಬಾರಿಗೆ  ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ -Vishwanews24

ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಬುಧವಾರದಂದು ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ 24 ಗಂಟೆಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ ಎನ್ನಲಾಗಿದೆ.

ಉಡುಪಿ : ಮುಟ್ಟುಗೋಲು ಹಾಕಿಕೊಂಡ ಪಡಿತರ ಅಕ್ಕಿ ಬಹಿರಂಗ ಹರಾಜು -Vishwanews24

ಕೋವಿಡ್ ಪೀಡಿತರಾದವರಲ್ಲಿ ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಾಣು ಕಾಣಿಸಿಕೊಂಡಿದೆ. ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಅಲ್ಲಿಂದ ಬಂದವರಲ್ಲಿ ಈವರೆಗೆ 64 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ತಿಂಗಳು 10 ದಿನಗಳ ಅವಧಿಯಲ್ಲಿ 5,550 ಮಂದಿ ಕೊರೊನಾ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 555 ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ  ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 9.56 ಲಕ್ಷ ದಾಟಿದೆ.

ಉಡುಪಿ : ತೆಂಗಿನ ಬೆಳೆಯಲ್ಲಿ ಬಿಳಿನೊಣ ಹಾನಿಯ ನಿಯಂತ್ರಣ ಕ್ರಮಗಳು -Vishwanews24

ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಐದು ಮಂದಿ ಹಾಗೂ ದಕ್ಷಿಣ ಕನ್ನಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಸಾವಿಗೀಡಾದವರ ಒಟ್ಟು ಸಂಖ್ಯೆ 12,379ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ 331 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 9.36 ಲಕ್ಷ ದಾಟಿದೆ. ಒಂದು ದಿನದ ಅವಧಿಯಲ್ಲಿ 70 ಸಾವಿರ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈವರೆಗೆ 1.94 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, ಸದ್ಯ 7,456 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ 488 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.09 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 22 ಪ್ರಕರಣಗಳು ದೃಢಪಟ್ಟಿವೆ. ಅಲ್ಲಿ ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 54,287ಕ್ಕೆ ತಲುಪಿದೆ. ಕಲಬುರ್ಗಿಯಲ್ಲಿ 37, ತುಮಕೂರಿನಲ್ಲಿ 36, ಉಡುಪಿಯಲ್ಲಿ 33, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 25 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಉಡುಪಿ :ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ ; ಮಾ. 15,16ಕ್ಕೆ ಬ್ಯಾಂಕ್ ಬಂದ್ -Vishwanews24

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

16 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

16 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

16 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

17 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

17 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

19 hours ago