Featured

ಕರ್ನಾಟಕದಲ್ಲಿ ಮೊದಲ ಬಾರಿಗೆ  ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ -Vishwanews24

ಕರ್ನಾಟಕದಲ್ಲಿ ಮೊದಲ ಬಾರಿಗೆ  ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ -Vishwanews24

ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಬುಧವಾರದಂದು ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ 24 ಗಂಟೆಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ ಎನ್ನಲಾಗಿದೆ.

ಉಡುಪಿ : ಮುಟ್ಟುಗೋಲು ಹಾಕಿಕೊಂಡ ಪಡಿತರ ಅಕ್ಕಿ ಬಹಿರಂಗ ಹರಾಜು -Vishwanews24

ಕೋವಿಡ್ ಪೀಡಿತರಾದವರಲ್ಲಿ ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಾಣು ಕಾಣಿಸಿಕೊಂಡಿದೆ. ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಅಲ್ಲಿಂದ ಬಂದವರಲ್ಲಿ ಈವರೆಗೆ 64 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ತಿಂಗಳು 10 ದಿನಗಳ ಅವಧಿಯಲ್ಲಿ 5,550 ಮಂದಿ ಕೊರೊನಾ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 555 ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ  ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 9.56 ಲಕ್ಷ ದಾಟಿದೆ.

ಉಡುಪಿ : ತೆಂಗಿನ ಬೆಳೆಯಲ್ಲಿ ಬಿಳಿನೊಣ ಹಾನಿಯ ನಿಯಂತ್ರಣ ಕ್ರಮಗಳು -Vishwanews24

ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಐದು ಮಂದಿ ಹಾಗೂ ದಕ್ಷಿಣ ಕನ್ನಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಸಾವಿಗೀಡಾದವರ ಒಟ್ಟು ಸಂಖ್ಯೆ 12,379ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ 331 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 9.36 ಲಕ್ಷ ದಾಟಿದೆ. ಒಂದು ದಿನದ ಅವಧಿಯಲ್ಲಿ 70 ಸಾವಿರ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈವರೆಗೆ 1.94 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, ಸದ್ಯ 7,456 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ 488 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.09 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 22 ಪ್ರಕರಣಗಳು ದೃಢಪಟ್ಟಿವೆ. ಅಲ್ಲಿ ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 54,287ಕ್ಕೆ ತಲುಪಿದೆ. ಕಲಬುರ್ಗಿಯಲ್ಲಿ 37, ತುಮಕೂರಿನಲ್ಲಿ 36, ಉಡುಪಿಯಲ್ಲಿ 33, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 25 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಉಡುಪಿ :ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ ; ಮಾ. 15,16ಕ್ಕೆ ಬ್ಯಾಂಕ್ ಬಂದ್ -Vishwanews24

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

12 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

12 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

13 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

13 hours ago