ಬೆಂಗಳೂರು: ಕರ್ನಾಟಕದಲ್ಲಿನ ರ್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶವನ್ನು ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ.
ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ಊಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶವನ್ನು ನೀಡಿತ್ತು.
1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 93 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆರು ವಾರಗಳ ಒಳಗೆ ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಲು ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನವನ್ನು ನೀಡಿತ್ತು.
ಆಗ ಸಚಿವ ರಾಮಲಿಂಗಾ ರೆಡ್ಡಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದರು. ಅಗತ್ಯ ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ಮೂರು ತಿಂಗಳುಗಳ ಕಾಲಾವಕಾಶ ನೀಡಲಾಗಿದೆ. ಸದ್ಯ ಹೈಕೋರ್ಟ್ ಆದೇಶ ಕಾರ್ಯಾಗತಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ನಿನ್ನೆ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಬೈಕ್ ಟ್ಯಾಕ್ಸಿಗಳನ್ನು ನಿಲ್ಲಿಸುವಂತೆ ಆದೇಶ ಮಾಡಲು ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಲಾಗಿತ್ತು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…