ಬೆಂಗಳೂರು: ಕರ್ನಾಟಕದಲ್ಲಿ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನು ನೋಡಿ ಎಲ್ಲವನ್ನು ಸರಿ ಮಾಡಿಕೊಳ್ಳಬೇಕು ಎಂದು ಮಾಜಿ ಕೇಂದ್ರ ಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎನ್ಡಿಎ ತಂಡಕ್ಕೆ ಇಂದು ಅದ್ಬುತ ಅವಕಾಶ ಇದೆ. ಸರ್ಕಾರ ಜಾಗ ನುಂಗಿಕೊಂಡು, ಹೆಂಡತಿ ಹೆಸರಿಗೆ ಮಾಡೋ ನಿಕೃಷ್ಟ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಇದನ್ನ ನಾವು ಬಳಕೆ ಮಾಡಿಕೊಳ್ಳಬೇಕು ಎಂದರು.
ಬಿಜೆಪಿ-ಜೆಡಿಎಸ್ ಒಡೆದ ಮನೆ ಆಗಿದೆ. ಕಾಂಗ್ರೆಸ್ ಒಡೆದ ಮನೆಯಾಗಿದೆ ಎನ್ನುವ ಬದಲು ನಮ್ಮದಾಗಿದೆ. ಯತ್ನಾಳ್, ಜಾರಕಿಹೋಳಿ ಒಂದು ಕಡೆ, ಜಿಟಿ ದೇವೇಗೌಡ ಮತ್ತೊಂದು. ಇದನ್ನ ನೋಡಿದ್ರೆ ವಿಪಕ್ಷ ಸ್ಟಾರ್ ಚೆನ್ನಾಗಿಲ್ಲ ಎಂದು ಅನಿಸುತ್ತದೆ.
ನಮ್ಮಲ್ಲಿ ಸಾಮರಸ್ಯವಿಲ್ಲ ಪ್ಲ್ಯಾನ್ ಆಫ್ ಆಕ್ಷನ್ ಇಲ್ಲದ್ದಕ್ಕೆ ನೋವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಇದು ನಮ್ಮ ಬಿಜೆಪಿ ಕಾರ್ಯಕರ್ತರ ಅಭಿಪ್ರಾಯವೂ ಆಗಿದ್ದು ಫೋನ್ ಮಾಡಿ ತಿಳಿಸುತ್ತಿದ್ದಾರೆ. ಒಂದು ಕಡೆ ರಾಜಕೀಯ ಹೋರಾಟ ಆಗಬೇಕು. ಮತ್ತೊಂದು ಕಡೆ ಕಾನೂನು ಹೋರಾಟ ಮಾಡಬೇಕು ಎಂದರು.
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…