ಬೆಂಗಳೂರು: ಕರ್ನಾಟಕದಲ್ಲಿ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನು ನೋಡಿ ಎಲ್ಲವನ್ನು ಸರಿ ಮಾಡಿಕೊಳ್ಳಬೇಕು ಎಂದು ಮಾಜಿ ಕೇಂದ್ರ ಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎನ್ಡಿಎ ತಂಡಕ್ಕೆ ಇಂದು ಅದ್ಬುತ ಅವಕಾಶ ಇದೆ. ಸರ್ಕಾರ ಜಾಗ ನುಂಗಿಕೊಂಡು, ಹೆಂಡತಿ ಹೆಸರಿಗೆ ಮಾಡೋ ನಿಕೃಷ್ಟ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಇದನ್ನ ನಾವು ಬಳಕೆ ಮಾಡಿಕೊಳ್ಳಬೇಕು ಎಂದರು.
ಬಿಜೆಪಿ-ಜೆಡಿಎಸ್ ಒಡೆದ ಮನೆ ಆಗಿದೆ. ಕಾಂಗ್ರೆಸ್ ಒಡೆದ ಮನೆಯಾಗಿದೆ ಎನ್ನುವ ಬದಲು ನಮ್ಮದಾಗಿದೆ. ಯತ್ನಾಳ್, ಜಾರಕಿಹೋಳಿ ಒಂದು ಕಡೆ, ಜಿಟಿ ದೇವೇಗೌಡ ಮತ್ತೊಂದು. ಇದನ್ನ ನೋಡಿದ್ರೆ ವಿಪಕ್ಷ ಸ್ಟಾರ್ ಚೆನ್ನಾಗಿಲ್ಲ ಎಂದು ಅನಿಸುತ್ತದೆ.
ನಮ್ಮಲ್ಲಿ ಸಾಮರಸ್ಯವಿಲ್ಲ ಪ್ಲ್ಯಾನ್ ಆಫ್ ಆಕ್ಷನ್ ಇಲ್ಲದ್ದಕ್ಕೆ ನೋವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಇದು ನಮ್ಮ ಬಿಜೆಪಿ ಕಾರ್ಯಕರ್ತರ ಅಭಿಪ್ರಾಯವೂ ಆಗಿದ್ದು ಫೋನ್ ಮಾಡಿ ತಿಳಿಸುತ್ತಿದ್ದಾರೆ. ಒಂದು ಕಡೆ ರಾಜಕೀಯ ಹೋರಾಟ ಆಗಬೇಕು. ಮತ್ತೊಂದು ಕಡೆ ಕಾನೂನು ಹೋರಾಟ ಮಾಡಬೇಕು ಎಂದರು.
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…