ಹರ್ಯಾಣ: ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ.
ಇಂದು ಹರ್ಯಾಣದ ಹಿಸಾರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ4ರಷ್ಟು ಮೀಸಲಾತಿ ಕುರಿತು ಮಾತನಾಡಿ, ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಕಲ್ಪಿಸಿದೆ .ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಿದೆ ಎಂದು ಹೇಳಿದ್ದಾರೆ. ಎಸ್ಸಿ, ಎಸ್ಟಿ, ಒಬಿಸಿ ವರ್ಗದ ಜನರಿಗೆ ವಂಚನೆ ಮಾಡಲಾಗುತ್ತಿದೆ. ಕಾಂಗ್ರೆಸ್ ಅಂಬೇಡ್ಕರ್ ಸಂವಿಧಾನಕ್ಕೆ ಅವಮಾನ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ವಕ್ಫ್ ತಿದ್ದುಪಡಿ ಮಸೂದೆಯನ್ನುಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ವಕ್ಫ್ ತಿದ್ದುಪಡಿ ಮಾಡಿ ಸಾಮಾಜಿಕ ನ್ಯಾಯ ಒದುಗಿಸುವ ಕೆಲಸ ಮಾಡಿದ್ದೇವೆ. ವಕ್ಫ್ ತಿದ್ದುಪಡಿ ಮಾಡಿ ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ವಕ್ಫ್ ತಿದ್ದುಪಡಿ ಮಸೂದೆಯಿಂದ ಮುಸ್ಲಿಮರಿಗೆ ಅನುಕೂಲ ಆಗಲಿದೆ, ಕಾಂಗ್ರೆಸ್ ಅವಧಿಯಲ್ಲಿ ವಕ್ಫ್ ನಿಯಮಗಳನ್ನು ಬದಲಾಯಿಸಲಾಗಿತ್ತು.
ವೋಟ್ಬ್ಯಾಂಕ್ಗಾಗಿ ವಕ್ಫ್ ನಿಯಮಗಳನ್ನು ಬದಲಾಯಿಸಲಾಗಿತ್ತು, ವಕ್ಫ್ ಹೆಸರಲ್ಲಿ ಭೂಮಿಯನ್ನು ಕಬಳಿಕೆ ಮಾಡುತ್ತಿದ್ದರು, ಬಡವರ ಭೂಮಿಯನ್ನು ವಕ್ಫ್ ಭೂಮಾಫಿಯಾ ಲೂಟಿ ಮಾಡಿದೆ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…